ಪಟ್ಟನಾಯಕನಹಳ್ಳಿ: ಶಿರಾ ತಾಲ್ಲೂಕಿನ ಹಂದಿಕುಂಟೆ ಗ್ರಾಮದ ಹಳ್ಳದಲ್ಲಿ ಜೂಜಾಡುತ್ತಿದ್ದ 12 ಮಂದಿಯನ್ನು ಬಂಧಿಸಿ, ₹ 1 ಲಕ್ಷ, 16 ಬೈಕ್, 11 ಮೊಬೈಲ್ ವಶಪಡಿಸಿಕೊಂಡಿದ್ದಾರೆ.
ಲಾಕ್ಡೌನ್ ಉಲ್ಲಂಘಿಡಿ ಜೂಜಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ್ದಾರೆ. ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಿವೈಎಸ್ಪಿ ಕುಮಾರಪ್ಪ ಮಾರ್ಗದರ್ಶನದಲ್ಲಿ ಶಿರಾ ಗ್ರಾಮಾಂತರ ವೃತ್ತ ನಿರೀಕ್ಷಕ ಶಿವಕುಮಾರ್, ಸಿಬ್ಬಂದಿಗಳಾದ ಕಿರಣ್ ಕುಮಾರ್, ರೇಣುಕಾ, ಕರೆಪ್ಪಾ ಹುಲಗೇರಿ, ಸಂತೋಷ್ ಕುಮಾರ್, ಬಾರಿಕರ್ ಹನುಮಂತ್ ದಾಳಿ ನೆಡಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.