
ಹುಳಿಯಾರು: ಪಟ್ಟಣ ಪಂಚಾಯಿತಿ ಮುಂದೆ ಸಂತೆ ಸ್ಥಳಾಂತರ ಹಾಗೂ ಕಸ ವಿಲೇವಾರಿ ಘಟಕಕ್ಕೆ ಸೂಕ್ತ ಜಾಗ ಗುರುತಿಸುವಂತೆ ಆಗ್ರಹಿಸಿ ರೈತ ಸಂಘ ನಡೆಸುತ್ತಿದ್ದ ಅಹೋರಾತ್ರಿ ಧರಣಿ ಮಂಗಳವಾರ 35ನೇ ದಿನಕ್ಕೆ ಕಾಲಿಟ್ಟಿದೆ.
ಪ್ರತಿಭಟನೆಯ ತೀವ್ರತೆ ಹೆಚ್ಚಿದ ಹಿನ್ನೆಲೆಯಲ್ಲಿ ಪಟ್ಟಣದ ವೈದ್ಯರು ಸ್ಥಳಕ್ಕೆ ಭೇಟಿ ನೀಡಿ ಧರಣಿನಿರತರೊಂದಿಗೆ ಮಾತುಕತೆ ನಡೆಸಿ ನೈತಿಕ ಬೆಂಬಲ ಸೂಚಿಸಿದರು.
ಸ್ಪಂದನ ನರ್ಸಿಂಗ್ ಹೋಂ ವ್ಯವಸ್ಥಾಪಕ ಡಾ. ಕೆ.ಎಚ್.ನಾಗರಾಜು ಮಾತನಾಡಿ, ರೈತಸಂಘದ ಸದಸ್ಯರು ಧರಣಿ ಮೂಲಕ ಒತ್ತಾಯಿಸುತ್ತಿರುವುದು ನ್ಯಾಯ ಬದ್ಧವಾಗಿದೆ. ಹೋರಾಟಕ್ಕೆ ಸ್ಪಂದಿಸಿ ಭರವಸೆ ಈಡೇರಿಸಬೇಕಿತ್ತು. ಧರಣಿಯಲ್ಲಿ ಪಾಲ್ಗೊಂಡು ಅವರ ಆರೋಗ್ಯ ಕೂಡ ಹದಗೆಡುತ್ತಿದೆ. ಕೂಡಲೇ ಜಿಲ್ಲಾಡಳಿತ ಸಮಸ್ಯೆ ಬಗೆಹರಿಸಬೇಕು ಎಂದು ಮನವಿ ಮಾಡಿದರು.
ವೈದ್ಯ ಎಸ್.ಜಿ.ಸಿದ್ದರಾಮಯ್ಯ, ಕೆ.ಪಿ. ರಾಜಶೇಖರ್, ಜಯಶೀಲ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.