ಶಿರಾ: ನಗರದ ಕಾಳಿದಾಸನಗರದಲ್ಲಿ ಶುಕ್ರವಾರ ರಾತ್ರಿ ಅಡುಗೆ ಅನಿಲ ಸೋರಿಕೆಯಾಗಿ 4 ಮಂದಿ ಗಾಯಗೊಂಡಿದ್ದಾರೆ.
ಕಾಳಿದಾಸನಗರದ ನಾಗರತ್ನಮ್ಮ ಅವರ ಮನೆಯಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ವಾಸನೆ ಬಂದಿದೆ. ಸರಿ ಪಡಿಸಲು ಪಕ್ಕದ ಮನೆಯ ನಾಗರಾಜು, ರೂಪಾ, ಚಂದ್ರಶೇಖರ್, ನಟರಾಜು ಬಂದಿದ್ದರು. ಸರಿ ಪಡಿಸುತ್ತಿದ್ದಾಗ ಹೆಚ್ಚಿನ ಪ್ರಮಾಣದಲ್ಲಿ ಸೋರಿಕೆಯಾಗಿ ದೇವರ ಮನೆಯಲ್ಲಿ ಹಚ್ಚಿದ್ದ ದೀಪದಿಂದ ಬೆಂಕಿ ಹತ್ತಿಕೊಂಡು ನಾಲ್ಕು ಜನರಿಗೂ ಗಾಯಗಳಾಗಿದೆ.
ಗಾಯಾಳುಗಳನ್ನು ತುಮಕೂರಿನ ಶ್ರೀದೇವಿ ಆಸ್ಪತ್ರೆಗೆ ಸೇರಿಸಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ನಾಗರಾಜ್ ಹಾಗೂ ಚಂದ್ರಶೇಖರ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿದೆ.
ಶಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.