ADVERTISEMENT

ಮಧುಗಿರಿ: ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ- ಕೊಲೆ ಶಂಕೆ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2022, 5:11 IST
Last Updated 8 ಸೆಪ್ಟೆಂಬರ್ 2022, 5:11 IST
   

ತುಮಕೂರು: ಮಧುಗಿರಿ ಪಟ್ಟಣದ ದಂಡಿನಮಾರಮ್ಮ ದೇವಾಲಯದ ಜಾತ್ರಾ ಬಯಲಿನಲ್ಲಿ ವಿದ್ಯಾರ್ಥಿನಿ ಶವ ಬೇವಿನ ಮರಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಗುರುವಾರ ಬೆಳಿಗ್ಗೆ ಪತ್ತೆಯಾಗಿದೆ.

ತಾಲ್ಲೂಕಿನ ಕಸಬಾ ವ್ಯಾಪ್ತಿಯ ಬಸವನಹಳ್ಳಿ ಗ್ರಾಮದ ಹನುಮಂತರಾಯಪ್ಪ ಎಂಬುವರ ಪುತ್ರಿ ಅಶ್ವಿನಿ (19) ಮೃತಪಟ್ಟ ದುರ್ದೈವಿ. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು.

ಅಶ್ವಿನಿಯನ್ನು ಕೊಲೆ ಮಾಡಲಾಗಿದೆ. ತನಿಖೆ ನಡೆಸಬೇಕು ಎಂದು ಕೋರಿ ಮೃತಳ ತಾಯಿ ಮಧುಗಿರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.