ಪಾವಗಡ: ಬ್ಯಾಂಕ್ಗಳಲ್ಲಿ ರೈತರು ಜಮೆ ಮಾಡಿರುವ ಬೆಳೆ ವಿಮೆ ಹಣವನ್ನು ಸರ್ಕಾರದಿಂದ ರೈತರಿಗೆ ಕೊಡಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪೂಜಾರಪ್ಪ ಒತ್ತಾಯಿಸಿದರು.
ಸೋಮವಾರ ಪಟ್ಟಣದ ಎಸ್ಬಿಐ ಬ್ಯಾಂಕ್ ಅಧಿಕಾರಿಗಳಿಗೆ ಮನವಿ ನೀಡಿ ಮಾತನಾಡಿದರು.
ಪ್ರತಿವರ್ಷ ರೈತರು ಬೆಳೆ ವಿಮೆ ಕಟ್ಟುತ್ತಿದ್ದಾರೆ. ಆದರೆ, ಬ್ಯಾಂಕ್ನಲ್ಲಿ ಕೆಲವು ರೈತರ ಬೆಳೆ ವಿಮೆ ಪಾವತಿಯಾಗುತ್ತಿಲ್ಲ. ಬ್ಯಾಂಕ್ನಲ್ಲಿ ಕೇಳಿದರೆ ಸರ್ಕಾರಕ್ಕೆ ಪಾವತಿಯಾಗಿಲ್ಲದ ರೈತರ ಬೆಳೆ ವಿಮೆ ಹಣವನ್ನು ವಾಪಸ್ ನೀಡಲಾಗುತ್ತದೆ ಎನ್ನುತ್ತಿದ್ದಾರೆ. ಆದರೆ, ಹಣ ಇನ್ನೂ ರೈತರ ಕೈ ಸೇರಿಲ್ಲ. ಈ ಬಗ್ಗೆ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಈ ಬಗ್ಗೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಕೃಷ್ಣರಾವ್, ವೀರಭದ್ರಪ್ಪ, ವೆಂಕಟಸ್ವಾಮಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.