ಶಿರಾ: ತಾಲ್ಲೂಕಿನ ಗೋಪಾಲ ದೇವರಹಳ್ಳಿ ಗ್ರಾಮ ಪಂಚಾಯಿತಿಗೆ ಸೋಮವಾರ ನಡೆದ ಉಪ ಚುನಾವಣೆ ಶಾಂತಿಯುತವಾಗಿದ್ದು, ಶೇ 90.54ರಷ್ಟುಮತದಾನವಾಗಿದೆ.
ನೀರಾವರಿ ಯೋಜನೆಯ ಜಾರಿಗೆ ಆಗ್ರಹಿಸಿ ಗ್ರಾಮ ಪಂಚಾಯತಿ ಚುನಾವಣೆಯನ್ನು ಬಹಿಷ್ಕರಿಸಿದ್ದ ಹಿನ್ನೆಲೆಯಲ್ಲಿ ಈಗ ಉಪ ಚುನಾವಣೆ ನಡೆಯುತ್ತಿದೆ.
ಕೋವಿಡ್ ಹಿನ್ನೆಲೆಯಲ್ಲಿ ಮತಗಟ್ಟೆಯಲ್ಲಿ ಸ್ಯಾನಿಟೇಜ್ ಮಾಡಿಕೊಂಡ ನಂತರ ಮತ ಚಲಾಯಿಸಲು ಮತಗಟ್ಟೆಗೆ ಬಿಡಲಾಗುತ್ತಿತ್ತು. ಎಲ್ಲಾ ಮತಗಟ್ಟೆಗಳಲ್ಲಿ ಅಗತ್ಯ ಮುಂಜಾಗ್ರತೆವಹಿಸಲಾಗಿತ್ತು.
ಗೋಪಾಲದೇವರಹಳ್ಳಿ ಗ್ರಾಮ ಪಂಚಾಯಿತಿಯ 9 ಕ್ಷೇತ್ರಗಳ 16 ಸ್ಥಾನಗಳಿಗೆ ಚುನಾವಣೆ ನಡೆದಿದೆ. ಅದರಲ್ಲಿ ಓಬಳಿಹಳ್ಳಿಯಲ್ಲಿ ಒಬ್ಬರು ಅವಿರೋಧವಾಗಿ ಆಯ್ಕೆಯಾಗಿರುವುದರಿಂದ 15 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, 45 ಮಂದಿ ಕಣದಲ್ಲಿದ್ದಾರೆ.
ಮತ ಎಣಿಕೆ ಮಾರ್ಚ್ 31ರಂದು ತಾಲ್ಲೂಕು ಕೇಂದ್ರದಲ್ಲಿ ನಡೆಯಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.