ತುಮಕೂರು: ಕೊರಟಗೆರೆ ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಗೊರವನಹಳ್ಳಿ ಮಹಾಲಕ್ಷ್ಮಿ ದೇವಾಲಯದ ಪ್ರಧಾನ ಅರ್ಚಕ ಪ್ರಸನ್ನ ಕುಮಾರ (63) ಶನಿವಾರ ಮಧ್ಯಾಹ್ನ ಮೃತಪಟ್ಟಿದ್ದು, ದೇವಾಲಯದ ಪೂಜಾ ಕೈಂಕರ್ಯಗಳು ಹಾಗೂ ದೇವರ ದರ್ಶನವನ್ನು ಭಾನುವಾರ ಮಧ್ಯಾಹ್ನ 1 ಗಂಟೆವರೆಗೆ ನಿರ್ಬಂಧಿಸಲಾಗಿದೆ.
ದೇವಾಲಯದ ಸಂಸ್ಥಾಪಕಿ ಕಮಲಮ್ಮ ಅವರ ಸಾಕು ಮಗನಾಗಿದ್ದ ಪ್ರಸನ್ನ ಕುಮಾರ್ ಅನಾರೋಗ್ಯದಿಂದ ಬಳಲುತ್ತಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ. ಭಾನುವಾರ ಬೆಳಿಗ್ಗೆ ಅಂತ್ಯಕ್ರಿಯೆ ನಡೆಯಲಿದೆ. ಪತ್ನಿ, ಪುತ್ರ, ಪುತ್ರಿ ಇದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.