ADVERTISEMENT

ತುಮಕೂರು: ಕಾರ್ಮಿಕರ ಬೀದಿಗೆ ತಳ್ಳುತ್ತಿರುವ ಸರ್ಕಾರ

ಕಾರ್ಮಿಕ ಅಧಿಕಾರಿ ಕಚೇರಿ ಮುಂದೆ ತ್ರಿವೇಣಿ ಏರೋನಾಟಿಕ್ಸ್ ಸಂಸ್ಥೆ ಕಾರ್ಮಿಕರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2020, 4:57 IST
Last Updated 5 ಸೆಪ್ಟೆಂಬರ್ 2020, 4:57 IST
ತ್ರಿವೇಣಿ ಏರೋನಾಟಿಕ್ಸ್ ಸಂಸ್ಥೆ ಕಾರ್ಮಿಕರು ತುಮಕೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿದರು
ತ್ರಿವೇಣಿ ಏರೋನಾಟಿಕ್ಸ್ ಸಂಸ್ಥೆ ಕಾರ್ಮಿಕರು ತುಮಕೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿದರು   

ತುಮಕೂರು: ಕಾರ್ಮಿಕರ ವಿಚಾರದಲ್ಲಿ ಕಾನೂನುಬಾಹಿರವಾಗಿ ಆಡಳಿತ ಮಂಡಳಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿ ತ್ರಿವೇಣಿ ಏರೋನಾಟಿಕ್ಸ್ ಸಂಸ್ಥೆ ಕಾರ್ಮಿಕರು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಕಾರ್ಮಿಕ ಅಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟಿಸಿದರು. ಜಿಲ್ಲಾಧಿಕಾರಿ ಮಧ್ಯಪ್ರವೇಶಿಸಿ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿದರು.

ಸಿಐಟಿಯು ತಾಲ್ಲೂಕು ಘಟಕದ ಅಧ್ಯಕ್ಷ ಷಣ್ಮುಖಪ್ಪ, ‘ಕೊರೊನಾ ದುರ್ಲಾಭ ಪಡೆದು ಸರ್ಕಾರ ಕಾರ್ಮಿಕರನ್ನು ಬೀದಿಗೆ ತಳ್ಳುತ್ತಿದೆ. ಕಾರ್ಮಿಕರ ಕುಟುಂಬಗಳೊಂದಿಗೆ ಚಲ್ಲಾಟವಾಡುತ್ತಿದೆ’ ಎಂದು ಆರೋಪಿಸಿದರು.

ಕಾರ್ಮಿಕರು ಸಂಕಷ್ಟದಲ್ಲಿ ನರಳುತ್ತಿದ್ದರೂ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ. ಮಾಲೀಕರು ಕಾರ್ಮಿಕ ಕಾನೂನು ಉಲ್ಲಂಘಿಸುತ್ತಿದ್ದಾರೆ. ಯಾರೂ ಕೂಡ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದರು.

ADVERTISEMENT

ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಹ್ಮಣ್ಯ, ‘ಸಂಘದಲ್ಲಿರುವ ಹಿರಿಯ ಕಾರ್ಮಿಕರನ್ನು ಹೊರಗಿಟ್ಟು ಗುತ್ತಿಗೆ, ಟ್ರೈನಿಗಳಿಂದ ಕಂಪನಿ ಉತ್ಪಾದನೆಯಲ್ಲಿ ತೊಡಗಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ’ ಎಂದರು.

ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್ ಮುಜೀಬ್, ‘ಆಡಳಿತ ಮಂಡಳಿಯ ಸಂಕಷ್ಟವನ್ನು ಹಂಚಿಕೊಳ್ಳಲು ಕಾರ್ಮಿಕ ಸಂಘ ತಯಾರಿ ಇತ್ತು. ಮಾತುಕತೆ ನಡೆಸಲು ಸಂಘವು ಆಡಳಿತ ಮಂಡಳಿಯಲ್ಲಿ ಹಲವು ಬಾರಿ ಕೋರಿತ್ತು. ಆದರೆ ಸ್ಪಂದಿಸಿಲ್ಲ’ ಎಂದು ಆರೋಪಿಸಿದರು.

ಮುಖಂಡರಾದ ಲಿಂಗೇಶ್, ಗಿರೀಶ್, ಮಂಜುನಾಥ್, ಸಂತೋಷ, ಶ್ರೀಕಾಂತ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.