ADVERTISEMENT

ಸರ್ಕಾರದ ಯೋಜನೆ: ಮಾಹಿತಿ ಸಂಗ್ರಹ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2023, 14:39 IST
Last Updated 14 ಮಾರ್ಚ್ 2023, 14:39 IST
ತುಮಕೂರು ತಾಲ್ಲೂಕು ಮೈದಾಳದಲ್ಲಿ ಮಾಹಿತಿ ಸಂಗ್ರಹ, ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ, ಗ್ರಾ.ಪಂ ಅಧ್ಯಕ್ಷೆ ಮಾಲಾ ಮಂಜುನಾಥ್, ಉಪಾಧ್ಯಕ್ಷ ನರಸಿಂಹಮೂರ್ತಿ, ವಕೀಲ ಕಿರಣ್, ಡಾ.ವಿ.ಕಿಶೋರ್, ರೂಪ, ಪುಷ್ಪ, ಡಾ.ಮುದ್ದುರಾಜು ಇದ್ದರು
ತುಮಕೂರು ತಾಲ್ಲೂಕು ಮೈದಾಳದಲ್ಲಿ ಮಾಹಿತಿ ಸಂಗ್ರಹ, ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ, ಗ್ರಾ.ಪಂ ಅಧ್ಯಕ್ಷೆ ಮಾಲಾ ಮಂಜುನಾಥ್, ಉಪಾಧ್ಯಕ್ಷ ನರಸಿಂಹಮೂರ್ತಿ, ವಕೀಲ ಕಿರಣ್, ಡಾ.ವಿ.ಕಿಶೋರ್, ರೂಪ, ಪುಷ್ಪ, ಡಾ.ಮುದ್ದುರಾಜು ಇದ್ದರು   

ತುಮಕೂರು: ಅಮೃತ ಯೋಜನೆಯಡಿ ಆಯ್ಕೆಯಾಗಿರುವ ಮೈದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಯ ಜನರಿಂದ ಸೌಲಭ್ಯ ಬಳಕೆ ಕುರಿತು ಮಾಹಿತಿ ಸಂಗ್ರಹ ಹಾಗೂ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಶ್ರಯದಲ್ಲಿ ವಿದ್ಯೋದಯ ಕಾನೂನು ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶರಾದ ನೂರುನ್ನೀಸಾ, ‘ಸರ್ಕಾರದ ಸೌಲಭ್ಯಗಳನ್ನು ಜನರು ಯಾವ ರೀತಿ ಪಡೆದುಕೊಂಡಿದ್ದಾರೆ. ಕಾನೂನಿನ ಅರಿವು ಯಾವ ಮಟ್ಟದಲ್ಲಿ ಇದೆ ಎಂಬುದನ್ನು ಅರಿಯಲು ಎನ್ಎಸ್ಎಸ್ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಂಡಿರುವುದು ಉತ್ತಮ ಕಾರ್ಯವಾಗಿದೆ’ ಎಂದು ಹೇಳಿದರು.

ಗ್ರಾಮೀಣ ಜನರ ಕಷ್ಟಗಳನ್ನು ಅರಿಯಲು ಹಾಗೂ ಕಾನೂನು ಅರಿವು ಮೂಡಿಸಲು ಈ ಕೆಲಸ ಸಹಕಾರಿಯಾಗಿದೆ ಎಂದು ತಿಳಿಸಿದರು.

ADVERTISEMENT

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಲಾ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ನರಸಿಂಹಮೂರ್ತಿ, ಪಿಡಿಒ ಮೋಹನ್, ವಕೀಲ ಕಿರಣ್, ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿಗಳಾದ ಡಾ.ವಿ.ಕಿಶೋರ್, ರೂಪ, ಪುಷ್ಪ, ಡಾ.ಮುದ್ದುರಾಜು ಉಪಸ್ಥಿತರಿದ್ದರು.

ಮೈದಾಳ, ಮಾದಗೊಂಡನಹಳ್ಳಿ, ಕೊಂಡನಾಯಕನಹಳ್ಳಿ ಗ್ರಾಮದಲ್ಲಿ ಕಾನೂನು ಅರಿವು ಮೂಡಿಸಲಾಯಿತು. ಸರ್ಕಾರದ ಸೌಲಭ್ಯಗಳ ಕುರಿತು ಸಮೀಕ್ಷೆ ಮಾಡಲಾಯಿತು.

ತುಮಕೂರು: ಅಮೃತ ಯೋಜನೆಯಡಿ ಆಯ್ಕೆಯಾಗಿರುವ ಮೈದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಯ ಜನರಿಂದ ಸೌಲಭ್ಯ ಬಳಕೆ ಕುರಿತು ಮಾಹಿತಿ ಸಂಗ್ರಹ ಹಾಗೂ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಶ್ರಯದಲ್ಲಿ ವಿದ್ಯೋದಯ ಕಾನೂನು ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶರಾದ ನೂರುನ್ನೀಸಾ, ‘ಸರ್ಕಾರದ ಸೌಲಭ್ಯಗಳನ್ನು ಜನರು ಯಾವ ರೀತಿ ಪಡೆದುಕೊಂಡಿದ್ದಾರೆ. ಕಾನೂನಿನ ಅರಿವು ಯಾವ ಮಟ್ಟದಲ್ಲಿ ಇದೆ ಎಂಬುದನ್ನು ಅರಿಯಲು ಎನ್ಎಸ್ಎಸ್ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಂಡಿರುವುದು ಉತ್ತಮ ಕಾರ್ಯವಾಗಿದೆ’ ಎಂದು ಹೇಳಿದರು.

ಗ್ರಾಮೀಣ ಜನರ ಕಷ್ಟಗಳನ್ನು ಅರಿಯಲು ಹಾಗೂ ಕಾನೂನು ಅರಿವು ಮೂಡಿಸಲು ಈ ಕೆಲಸ ಸಹಕಾರಿಯಾಗಿದೆ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಲಾ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ನರಸಿಂಹಮೂರ್ತಿ, ಪಿಡಿಒ ಮೋಹನ್, ವಕೀಲ ಕಿರಣ್, ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿಗಳಾದ ಡಾ.ವಿ.ಕಿಶೋರ್, ರೂಪ, ಪುಷ್ಪ, ಡಾ.ಮುದ್ದುರಾಜು ಉಪಸ್ಥಿತರಿದ್ದರು.

ಮೈದಾಳ, ಮಾದಗೊಂಡನಹಳ್ಳಿ, ಕೊಂಡನಾಯಕನಹಳ್ಳಿ ಗ್ರಾಮದಲ್ಲಿ ಕಾನೂನು ಅರಿವು ಮೂಡಿಸಲಾಯಿತು. ಸರ್ಕಾರದ ಸೌಲಭ್ಯಗಳ ಕುರಿತು ಸಮೀಕ್ಷೆ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.