ತುಮಕೂರು: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ನೌಕರರು ನಗರ ಹಾಗೂ ಜಿಲ್ಲೆಯ ವಿವಿಧೆಡೆ ಬುಧವಾರ ಮುಷ್ಕರ ನಡೆಸಿದರು.
ನೌಕರರು, ಸಿಬ್ಬಂದಿ ಕೆಲಸಕ್ಕೆ ಗೈರು ಹಾಜರಾಗುವ ಮೂಲಕ ಪ್ರತಿಭಟನೆ ವ್ಯಕ್ತಪಡಿಸಿದ್ದು, ಬಹುತೇಕ ಕಚೇರಿಗಳಲ್ಲಿ ಸಿಬ್ಬಂದಿ ಹಾಜರಾತಿ ಇರಲಿಲ್ಲ. ಜಿಲ್ಲಾ ಆಸ್ಪತ್ರೆಯಲ್ಲಿ ಹೊರ ರೋಗಿಗಳ ವಿಭಾಗವನ್ನು ಮುಚ್ಚಲಾಗಿದೆ. ಐಸಿಯು, ಅಪಘಾತ ವಿಭಾಗದಲ್ಲಿ ಮಾತ್ರ ವೈದ್ಯರು, ಸಿಬ್ಬಂದಿ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದರು. ಚಿಕಿತ್ಸೆಗೆ ಬಂದ ರೋಗಿಗಳು ವಾಪಸಾಗುತ್ತಿದ್ದ ದೃಷ್ಯಗಳು ಕಂಡು ಬಂದವು.
ಸದಾ ಜನರಿಂದ ತುಂಬಿರುತ್ತಿದ್ದ ಜಿಲ್ಲಾಧಿಕಾರಿ ಕಚೇರಿ, ಉಪನೋಂದಣಾಧಿಕಾರಿ ಕಚೇರಿ, ತಾಲ್ಲೂಕು ಕಚೇರಿಗಳು ಸೇರಿದಂತೆ ಬಹುತೇಕ ಕಡೆಗಳಲ್ಲಿ ನೌಕರರ ಗೈರು ಹಾಜರಿ ಎದ್ದು ಕಾಣುತಿತ್ತು. ಮುಷ್ಕರದ ವಿಚಾರ ತಿಳಿದ ಜನರು ಕಚೇರಿಗಳತ್ತ ಸುಳಿಯಲಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.