ADVERTISEMENT

ಜನರು ಉತ್ತಮ‌ ಅಭ್ಯರ್ಥಿಗಳನ್ನು ಆಯ್ಕೆ ಮಾಡುವರು: ಡಾ.ಜಿ.ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2020, 5:31 IST
Last Updated 22 ಡಿಸೆಂಬರ್ 2020, 5:31 IST
   

ತುಮಕೂರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜನರು ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ. ಈ ಚುನಾವಣೆಯಲ್ಲಿ ಜನರು ಒಳ್ಳೆಯ ತೀರ್ಪು ನೀಡುವರು ಎಂದು ಶಾಸಕ ಡಾ.ಜಿ.ಪರಮೇಶ್ವರ ತಿಳಿಸಿದರು.

ನಗರ ಹೊರವಲಯದ ಸಿದ್ದಾರ್ಥ ನಗರದ ಮತಗಟ್ಟೆಯಲ್ಲಿ ಮತದಾನ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಪಂಚಾಯಿತಿ ಚುನಾವಣೆಯಲ್ಲಿ ಪಕ್ಷವೂ ಮುಖ್ಯವಾಗುತ್ತದೆ. ಅದರ ಜತೆಗೆ ಜನರು ತಮಗೆ ಸ್ಪಂದಿಸುವ ಅಭ್ಯರ್ಥಿಗಳು ಮತ್ತು ಸ್ಥಳೀಯ ವಿಚಾರಗಳನ್ನು ಪ್ರಮುಖವಾಗಿ ಗಮನಿಸಿ ಮತ ಹಾಕುವರು ಎಂದರು.

ನಾವು ರಾಜಕೀಯ ನಾಯಕರು ಜನರ ಮುಂದೆ ಅಸಂಬದ್ಧವಾಗಿ ಮಾತನಾಡಬಾರದು. ಅದು ಜನರಿಗೆ ಮನರಂಜನೆ ಆಗುತ್ತದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.