ಪಾವಗಡ: ತಾಲ್ಲೂಕಿನ ಕೋಟಗುಡ್ಡ ಬಳಿಯ ಮದ್ಲೇರಹಳ್ಳಿ ಅರಣ್ಯ ಪ್ರದೇಶದ ಬಳಿ ಬುಧವಾರ ರಾತ್ರಿ ದ್ವಿಚಕ್ರ ವಾಹನದಿಂದ ಬಿದ್ದು ಸವಾರ ಮೃತಪಟ್ಟಿದ್ದಾರೆ.
ತಾಲ್ಲೂಕಿನ ಬೆಳ್ಳಿಬಟ್ಟಲು ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಪ್ಪ (40) ಮೃತರು. ದ್ವಿಚಕ್ರ ವಾಹನದಲ್ಲಿ ಗ್ರಾಮಕ್ಕೆ ಹೋಗುತ್ತಿದ್ದಾಗ ಮದ್ಲೇರಹಳ್ಳಿ ಅರಣ್ಯ ಪ್ರದೇಶದ ಬಳಿ ಕಾಡು ಹಂದಿಗಳು ಬೈಕ್ಗೆ ಅಡ್ಡ ಬಂದಿವೆ. ನಿಯಂತ್ರಣ ತಪ್ಪಿ ವಾಹನದಿಂದ ಕೆಳಗೆ ಬಿದ್ದಿದ್ದಾರೆ.
ಗಾಯಗೊಂಡಿದ್ದ ಕೃಷ್ಣಪ್ಪ ಅವರನ್ನು ಪಟ್ಟಣದ ಆಸ್ಪತ್ರೆಗೆ ಸೇರಿಸಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.