ADVERTISEMENT

ಗ್ರಾ.ಪಂ. ಸದಸ್ಯನಿಂದ ಹಲ್ಲೆ

ಸಾಲ ವಾಪಸ್‌ ಕೇಳಿದವನ ಮೇಲೆ ದೌರ್ಜನ್ಯ

​ಪ್ರಜಾವಾಣಿ ವಾರ್ತೆ
Published 19 ಜನವರಿ 2021, 2:37 IST
Last Updated 19 ಜನವರಿ 2021, 2:37 IST

ಕೊಡಿಗೇನಹಳ್ಳಿ (ಮಧುಗಿರಿ ತಾ): ಸಾಲ ವಾಪಸ್‌ ಕೇಳಿದ ನರಸಪ್ಪ ಅವರ ಮೇಲೆ ಗ್ರಾಮ ಪಂಚಾಯಿತಿ ಸದಸ್ಯ ಲಕ್ಷ್ಮೀನಾರಾಯಣ ಹಾಗೂ ಆತನ ಸ್ನೇಹಿತರು ಮಚ್ಚು ಹಾಗೂ ಕಬ್ಬಿಣದ ರಾಡುಗಳಿಂದ ಹಲ್ಲೆ ಮಾಡಿದ್ದಾರೆ.

ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಂಡುಗಲ್ಲು ಗ್ರಾಮದ ನರಸಪ್ಪ ಅವರು ಅದೇ ಗ್ರಾಮದ ಲಕ್ಷ್ಮೀನಾರಾಯಣ ಅವರಿಗೆ ಚುನಾವಣೆಗೂ ಮುನ್ನ ಸಾಲ ನೀಡಿದ್ದರು. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನರಸಪ್ಪ ಕೂಡ ಸ್ಪರ್ಧಿಸಿದ್ದರು. ಲಕ್ಷ್ಮೀನಾರಾಯಣ ವಿರುದ್ಧ ಸೋತಿದ್ದರಿಂದ ಬೇಸರಗೊಂಡ ನರಸಪ್ಪ ಸಾಲ ವಾಪಸ್‌ ಕೇಳಿದ್ದಾರೆ. ಇದರಿಂದ ಕುಪಿತಗೊಂಡ ಲಕ್ಷ್ಮೀನಾರಾಯಣ ಹಾಗೂ ಅದೇ ಗ್ರಾಮದವರಾದ ಗಂಗಪ್ಪ, ನರೇಂದ್ರಬಾಬು, ಗಂಗಾಧರಪ್ಪ ಹಾಗೂ ನಾರಾಯಣಪ್ಪ ಅವರೊಂದಿಗೆ ಸೇರಿಕೊಂಡು ಹಲ್ಲೆ ನಡೆಸಿದ್ದಾರೆ ಎಂದು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT