ADVERTISEMENT

ತುಮಕೂರು| ಜಿಎಸ್‌ಟಿ ಪರಿಷ್ಕರಣೆಯಿಂದ ಜನರಿಗೆ ನೆರವು: ವಿ.ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2025, 6:50 IST
Last Updated 19 ಸೆಪ್ಟೆಂಬರ್ 2025, 6:50 IST
ತುಮಕೂರಿನಲ್ಲಿ ಬುಧವಾರ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಬೆಳ್ಳಿಹಬ್ಬ ಆಚರಣೆಯ ಲೋಗೊವನ್ನು ಸಚಿವ ವಿ.ಸೋಮಣ್ಣ ಅನಾವರಣಗೊಳಿಸಿದರು. ಶಾಸಕ ಬಿ.ಸುರೇಶ್‌ಗೌಡ, ಸಂಸ್ಥೆ ಪದಾಧಿಕಾರಿಗಳಾದ ಪಾಂಡುರಂಗ ಕರಂದವಾಡ, ಸಂಜಯ್, ಶ್ರೀಕಂಠಸ್ವಾಮಿ, ರವಿಶಂಕರ್, ಟಿ.ಜೆ.ಗಿರೀಶ್, ಸುಜ್ಞಾನ್ ಹಿರೇಮಠ್ ಉಪಸ್ಥಿತರಿದ್ದರು
ತುಮಕೂರಿನಲ್ಲಿ ಬುಧವಾರ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಬೆಳ್ಳಿಹಬ್ಬ ಆಚರಣೆಯ ಲೋಗೊವನ್ನು ಸಚಿವ ವಿ.ಸೋಮಣ್ಣ ಅನಾವರಣಗೊಳಿಸಿದರು. ಶಾಸಕ ಬಿ.ಸುರೇಶ್‌ಗೌಡ, ಸಂಸ್ಥೆ ಪದಾಧಿಕಾರಿಗಳಾದ ಪಾಂಡುರಂಗ ಕರಂದವಾಡ, ಸಂಜಯ್, ಶ್ರೀಕಂಠಸ್ವಾಮಿ, ರವಿಶಂಕರ್, ಟಿ.ಜೆ.ಗಿರೀಶ್, ಸುಜ್ಞಾನ್ ಹಿರೇಮಠ್ ಉಪಸ್ಥಿತರಿದ್ದರು   

ತುಮಕೂರು: ಕೇಂದ್ರ ಸರ್ಕಾರ ಸರಕು ಹಾಗೂ ಸೇವಾ ತೆರಿಗೆ (ಜಿಎಸ್‍ಟಿ) ದರ ಪರಿಷ್ಕರಣೆ ಮಾಡುವ ಮೂಲಕ ಜನಸಾಮಾನ್ಯರ ಮೇಲಿನ ತೆರಿಗೆ ಭಾರ ಇಳಿಸಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.

ನಗರದಲ್ಲಿ ಬುಧವಾರ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಏರ್ಪಡಿಸಿದ್ದ ‘ಜಿಎಸ್‍ಟಿ-2.0 ಸುಧಾರಣೆಗಳು-2025’ ಕುರಿತು ಮಾಹಿತಿ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಹೊಸ ತೆರಿಗೆ ಪದ್ಧತಿ ಸೆ. 22ರಿಂದ ದೇಶದಾದ್ಯಂತ ಜಾರಿಗೆ ಬರಲಿದೆ. ಇದರಿಂದ ಜನಸಾಮಾನ್ಯರ ಬದುಕಿನ ಹೊರೆ ತಗ್ಗಲಿದೆ. ಜನರು ಪ್ರತಿನಿತ್ಯ ಬಳಸುವ ಎಲ್ಲ ಉತ್ಪನ್ನಗಳ ಮೇಲೆ ಜಿಎಸ್‍ಟಿ ಸುಧಾರಣೆಗಳ ಪರಿಣಾಮ ಕಾಣಬಹುದಾಗಿದೆ. ಅದೇ ರೀತಿ ವ್ಯಾಪಾರಸ್ಥರ ಕಾರ್ಯವಿಧಾನವನ್ನು ಸರಳಗೊಳಿಸಲಾಗಿದೆ ಎಂದು ಹೇಳಿದರು.

ADVERTISEMENT

ಜಿಎಸ್‍ಟಿ ಮಂಡಳಿಯು 350ಕ್ಕೂ ಹೆಚ್ಚು ಉತ್ಪನ್ನಗಳ ತೆರಿಗೆ ದರಗಳನ್ನು ಪರಿಷ್ಕರಣೆ ಮಾಡಿದೆ. ಪ್ರಸ್ತುತ ಶೇ 5 ಹಾಗೂ ಶೇ 18ರ ಪ್ರಮಾಣದ ಎರಡು ಹಂತದ ಜಿಎಸ್‍ಟಿ ವ್ಯವಸ್ಥೆ ಜಾರಿಗೊಳಿಸಿದೆ ಎಂದರು.

ಶಾಸಕ ಬಿ.ಸುರೇಶ್‍ಗೌಡ, ‘ಯಾವುದೇ ದೇಶ ಬಲಿಷ್ಠ, ಪ್ರಗತಿ ಹೊಂದಬೇಕಾದರೆ ಸದೃಢವಾದ, ಸಾಮಾನ್ಯರಿಗೆ ನಿಲುಕುವಂತಹ ತೆರಿಗೆ ಪದ್ಧತಿ ಇರಬೇಕಾಗುತ್ತದೆ’ ಎಂದು ತಿಳಿಸಿದರು.

ಸಂಸ್ಥೆ ಅಧ್ಯಕ್ಷ ಪಾಂಡುರಂಗ ಕರಂದವಾಡ, ಉಪಾಧ್ಯಕ್ಷ ಸಂಜಯ್, ಪ್ರಧಾನ ಕಾರ್ಯದರ್ಶಿ ಶ್ರೀಕಂಠಸ್ವಾಮಿ, ಖಜಾಂಚಿ ರವಿಶಂಕರ್, ಪ್ರಮುಖರಾದ ಟಿ.ಜೆ.ಗಿರೀಶ್, ಸುಜ್ಞಾನ್ ಹಿರೇಮಠ್, ಆಶಿದ್, ಟಿ.ಆರ್.ಆನಂದ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.