ಗುಬ್ಬಿ: ರಾಷ್ಟ್ರೀಯ ಹೆದ್ದಾರಿ 73ರ ಹೇರೂರಿನ ಬಳಿ ಗುರುವಾರ ವೇಗವಾಗಿ ಬಂದ ಕಾರು ಗುದ್ದಿದ ಪರಿಣಾಮ ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ ಹೊನ್ನಶೆಟ್ಟಿಹಳ್ಳಿ ಸರ್ಕಾರಿ ಶಾಲೆ ಶಿಕ್ಷಕಿ, ಪಟ್ಟಣದ ನಿವಾಸಿ ಜಯಂತಿಮಾಲ (58) ಮೃತಪಟ್ಟಿದ್ದಾರೆ.
ತುಮಕೂರು ಕಡೆಯಿಂದ ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಶಿಕ್ಷಕಿ ರಸ್ತೆಗೆ ಬಿದ್ದರು. ತಲೆಗೆ ತೀವ್ರವಾಗಿ ಪೆಟ್ಟಾಗಿದ್ದ ಅವರು, ಬೆಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟರು.
ಮೃತರಿಗೆ ಪತಿ, ಪುತ್ರ ಹಾಗೂ ಪುತ್ರಿ ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.