ADVERTISEMENT

ಗುಬ್ಬಿ: ದ್ವೇಷಕ್ಕೆ ಬಲಿಯಾದ ಅಡಿಕೆ ಸಸಿಗಳು

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2025, 14:09 IST
Last Updated 12 ಏಪ್ರಿಲ್ 2025, 14:09 IST
ಗುಬ್ಬಿ ತಾಲ್ಲೂಕಿನ ಶಿವರಾಂಪುರದ ರೈತ ತಿಮ್ಮರಾಯಪ್ಪ ಅವರ ಅಡಿಕೆ ಸಸಿಗಳನ್ನು ದುಷ್ಕರ್ಮಿಗಳು ಕಡಿದು ಹಾಕಿದ್ದಾರೆ
ಗುಬ್ಬಿ ತಾಲ್ಲೂಕಿನ ಶಿವರಾಂಪುರದ ರೈತ ತಿಮ್ಮರಾಯಪ್ಪ ಅವರ ಅಡಿಕೆ ಸಸಿಗಳನ್ನು ದುಷ್ಕರ್ಮಿಗಳು ಕಡಿದು ಹಾಕಿದ್ದಾರೆ   

ಗುಬ್ಬಿ: ತಾಲ್ಲೂಕಿನ ಹಾಗಲವಾಡಿ ಹೋಬಳಿ ಶಿವರಾಂಪುರ ಗ್ರಾಮದ ರೈತ ತಿಮ್ಮರಾಯಪ್ಪ ಅವರಿಗೆ ಸೇರಿದ 90ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ಕೆಲವು ದುಷ್ಕರ್ಮಿಗಳು ಕಡಿದು ಹಾಕಿದ್ದಾರೆ.

ಗ್ರಾಮದ ಕೆಲವರು ವೈಯಕ್ತಿಕ ದ್ವೇಷದಿಂದ ಅಡಿಕೆ ಸಸಿಗಳನ್ನು ಕಡಿದು ಹಾಕಿರುವ ಅನುಮಾನವಿದೆ. ಆದರೆ ಯಾರು ಎನ್ನುವುದು ಸರಿಯಾಗಿ ಗೊತ್ತಾಗುತ್ತಿಲ್ಲ. ಚೇಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಿ ನ್ಯಾಯ ಒದಗಿಸಬೇಕು ಎಂದು ತಿಮ್ಮರಾಯಪ್ಪ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT