ತುಮಕೂರು: ಜಿಲ್ಲೆಯಲ್ಲಿ ಐದು ಕೊರೊನಾ ಸೋಂಕಿನ ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಮನೆಮನೆಗೆ ತೆರಳಿ ಆರೋಗ್ಯ ಸಮೀಕ್ಷೆ ನಡೆಸಲು ಜಿಲ್ಲಾಡಳಿತ ನಿರ್ಧರಿಸಿದೆ.
ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಪಂಚಾಯಿತಿ ಅಧಿಕಾರಿಗಳು, ಕಂದಾಯ ಹಾಗೂ ಮತಗಟ್ಟೆ ಅಧಿಕಾರಿಗಳು ಈ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವರು.
‘ಪ್ರತಿ ಮನೆ ಮನೆಗೂ ಕಾರ್ಯಕರ್ತೆಯರು ಭೇಟಿ ನೀಡಿ ಆರೋಗ್ಯದ ಬಗ್ಗೆ ಮಾಹಿತಿ ಸಂಗ್ರಹಿಸುವರು. ಗಂಭೀರ ಕಾಯಿಲೆಗಳು ಇರುವವರ ಬಗ್ಗೆ ನಿಗಾವಹಿಸುವರು. ಇಂತಹ ಕಾಯಿಲೆಗಳಿದ್ದರೆ ಸಮರ್ಪಕ ಮಾಹಿತಿ ನೀಡಬೇಕು’ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ತಿಳಿಸಿದ್ದಾರೆ.
ಸಮೀಕ್ಷೆಗೆ ಬಂದಾಗ ಇವರಿಗೆ ಸರಿಯಾದ ಮಾಹಿತಿ ನೀಡಬೇಕು. ಯಾರಾದರೂ ಕಾರ್ಯಕ್ಕೆ ಅಡ್ಡಿಪಡಿಸಿದರೆ ಅಂತಹವರ ವಿರುದ್ಧ ಕಾನೂನು ರೀತಿ ಕ್ರಮಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.