ತುಮಕೂರು: ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ದೇವರಾಯನದುರ್ಗ ಬೆಟ್ಟದಲ್ಲಿ ಬೃಹತ್ ಬಂಡೆ ರಸ್ತೆಗೆ ಉರುಳಿ ಬಿದ್ದಿದೆ.
ಬೆಟ್ಟದ ಮೇಲಿನ ಚೆಕ್ ಪೋಸ್ಟ್ ಬಳಿ ಘಟನೆ ನಡೆದಿದೆ. ಯೋಗನರಸಿಂಹ ಸ್ವಾಮಿ ದೇವಾಲಯಕ್ಕೆ ತೆರಳುವ ರಸ್ತೆ ಬಂದಾಗಿದೆ.
ಮಳೆಯಿಂದ ಮಣ್ಣು ಕುಸಿದು ಬಂಡೆ ಉರುಳಿದೆ. ಪ್ರವಾಸಿಗರಿಗೆ, ಭಕ್ತರಿಗೆ ತಾತ್ಕಾಲಿಕವಾಗಿ ರಸ್ತೆ ಬಂದ್ ಆಗಿದೆ.
ದೇವಾಲಯದ ಅರ್ಚಕರಿಗೆ ಮಾತ್ರ ಬೆಟ್ಟಕ್ಕೆ ತೆರಳಲು ಅವಕಾಶ ಮಾಡಿಕೊಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.