ADVERTISEMENT

ನಿಷೇಧಾಜ್ಞೆ ಉಲ್ಲಂಘಿಸಿ ತೂಬು ಕಳಚಿ ನೀರು ಬಿಟ್ಟ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2019, 6:09 IST
Last Updated 25 ಆಗಸ್ಟ್ 2019, 6:09 IST
   

ತುಮಕೂರು: ಹೆಬ್ಬೂರು ಠಾಣೆ ವ್ಯಾಪ್ತಿಯ ಹೇಮಾವತಿ ನಾಲಾ ವ್ಯಾಪ್ತಿಯಲ್ಲಿ ತುಮಕೂರು ತಹಶೀಲ್ದಾರ್ ಶನಿವಾರ ಕಲಂ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿದ ಬೆನ್ನಲ್ಲೆ ಭಾನುವಾರ ಬೆಳಿಗ್ಗೆ ತುರುವೇಕೆರೆ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ನೇತೃತ್ವದಲ್ಲಿ ರೈತರು ನಾಲೆಯ ತೂಬು ಕಿತ್ತು ನೀರು ಬಿಟ್ಟಿದ್ದಾರೆ.

ಗುಬ್ಬಿ ತಾಲ್ಲೂಕು ಸಿಎಸ್.ಪುರ ಹೋಬಳಿಯ ಕಣಕುಪ್ಪೆ ಬಳಿ ನಾಲಾ ತೂಬು ಕಳಚಿ ನೀರು ಬಿಟ್ಟಿದ್ದಾರೆ ಎನ್ನಲಾಗಿದೆ. ತೂಬು ಕಳಚುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.