ADVERTISEMENT

ಗುಬ್ಬಿ | ಹೆಜ್ಜೇನು ದಾಳಿ: ಒಬ್ಬ ಸಾವು, 20 ಮಂದಿ ಅಸ್ವಸ್ಥ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2023, 10:48 IST
Last Updated 20 ನವೆಂಬರ್ 2023, 10:48 IST
   

ಗುಬ್ಬಿ: ತಾಲ್ಲೂಕಿನ ಲಕ್ಕೇನಹಳ್ಳಿ ಗೇಟ್‌ ಬಳಿಯ ತುಳಸಿ ರಂಗನಾಥಸ್ವಾಮಿ ದೇವಾಲಯದ ಆವರಣದಲ್ಲಿ ಸೋಮವಾರ ಹೆಜ್ಜೇನು ದಾಳಿಗೆ ಒಬ್ಬರು ಮೃತಪಟ್ಟಿದ್ದು, 20 ಜನ ಅಸ್ವಸ್ಥಗೊಂಡಿದ್ದಾರೆ.

ಬೆಲವತ್ತ ಗ್ರಾಮದ ವೀರಭದ್ರಯ್ಯ (47) ಮೃತರು. ದೇವಸ್ಥಾನದ ಆವರಣದಲ್ಲಿ ನಾಮಕರಣ ಕಾರ್ಯಕ್ರಮ ನಡೆಯುತ್ತಿದ್ದ ಸಮಯದಲ್ಲಿ ಇದ್ದಕ್ಕಿದ್ದಂತೆ ಹೆಜ್ಜೇನು ದಾಳಿ ನಡೆಸಿವೆ. ಅಸ್ವಸ್ಥಗೊಂಡವರನ್ನು ಗುಬ್ಬಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆ ಹತ್ತಿರ ಹೆಚ್ಚಿನ ಜನರು ಜಮಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT