ADVERTISEMENT

ಕರಡಿ ದಾಳಿ; ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2018, 12:51 IST
Last Updated 6 ಡಿಸೆಂಬರ್ 2018, 12:51 IST
ಜಿಲ್ಲಾ ಆಸ್ಪತ್ರೆಯಲ್ಲಿ ಗಾಯಾಳು ಕರೀಂ ಸಾಬ್ ಅವರ ಆರೋಗ್ಯ ವಿಚಾರಿಸುತ್ತಿರುವ ಸಚಿವ ಡಾ.ಜಿ.ಪರಮೇಶ್ವರ. ಡಾ.ಚಂದ್ರಿಕಾ, ಆರ್. ರಾಮಕೃಷ್ಣ ಇದ್ದರು
ಜಿಲ್ಲಾ ಆಸ್ಪತ್ರೆಯಲ್ಲಿ ಗಾಯಾಳು ಕರೀಂ ಸಾಬ್ ಅವರ ಆರೋಗ್ಯ ವಿಚಾರಿಸುತ್ತಿರುವ ಸಚಿವ ಡಾ.ಜಿ.ಪರಮೇಶ್ವರ. ಡಾ.ಚಂದ್ರಿಕಾ, ಆರ್. ರಾಮಕೃಷ್ಣ ಇದ್ದರು   

ತುಮಕೂರು: ಕರಡಿ ದಾಳಿಯಿಂದ ಗಾಯಗೊಂಡು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರಟಗೆರೆ ತಾಲ್ಲೂಕು ಸೊರೆನಹಳ್ಳಿ ಗ್ರಾಮದ ರೇಣುಕಮ್ಮ ಮತ್ತು ಕರೀಂಸಾಬ್ ಅವರ ಆರೋಗ್ಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಗುರುವಾರ ವಿಚಾರಿಸಿದರು.

ಗಾಯಾಳುಗಳಿಗೆ ಚಿಕಿತ್ಸೆ ಮತ್ರು ಅರೈಕೆಗೆ ಸಂಬಂಧಿಸಿದಂತೆ ಹೆಚ್ಚಿನ ನಿಗಾವಹಿಸಲು ವೈದ್ಯರಿಗೆ ಸೂಚಿಸಿದರು.

ಅರಣ್ಯ ಇಲಾಖೆಯವತಿಯಿಂದ ತಲಾ ₹ 20 ಸಾವಿರ ಪರಿಹಾರ ವಿತರಿಸಿದರು. ಅಲ್ಲದೇ ವೈಯಕ್ತಿಕವಾಗಿ ₹ 20 ಸಾವಿರ ನೀಡಿದರು.

ADVERTISEMENT

ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್, ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ.ವೀರಭದ್ರಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಿಕಾ, ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಆರ್. ರಾಮಕೃಷ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.