ADVERTISEMENT

ಬಿಜೆಪಿ ಗೆದ್ದರೆ ಅಭಿವೃದ್ಧಿಗೆ ಆದ್ಯತೆ: ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್ ಗೌಡ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2020, 2:56 IST
Last Updated 21 ಅಕ್ಟೋಬರ್ 2020, 2:56 IST
ಶಿರಾ ತಾಲ್ಲೂಕಿನ ಚನ್ನನಕುಂಟೆ ಗ್ರಾಮದಲ್ಲಿ ಮಂಗಳವಾರ ಬಿಜೆಪಿ ಚುನಾವಣೆ ಪ್ರಚಾರ ಸಭೆಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧರ್ಯಕ್ಷ ಸುರೇಶ್ ಗೌಡ ಮಾತನಾಡಿದರು
ಶಿರಾ ತಾಲ್ಲೂಕಿನ ಚನ್ನನಕುಂಟೆ ಗ್ರಾಮದಲ್ಲಿ ಮಂಗಳವಾರ ಬಿಜೆಪಿ ಚುನಾವಣೆ ಪ್ರಚಾರ ಸಭೆಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧರ್ಯಕ್ಷ ಸುರೇಶ್ ಗೌಡ ಮಾತನಾಡಿದರು   

ಶಿರಾ: ಶಿರಾ ಕ್ಷೇತ್ರದಲ್ಲಿ ಇದುವರೆಗೂ ಆಯ್ಕೆಯಾಗಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ನಿರ್ಲಕ್ಷದಿಂದಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಮರಿಚಿಕೆಯಾಗಿದೆ. ಬಿಜೆಪಿ ಶಾಸಕರು ಆಯ್ಕೆಯಾದರೆ ಹೆಚ್ಚಿನ ಅಭಿವೃದ್ಧಿ ಸಾಧ್ಯ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್ ಗೌಡ ಹೇಳಿದರು.

ತಾಲ್ಲೂಕಿನ ಚನ್ನನಕುಂಟೆ ಗ್ರಾಮದಲ್ಲಿ ಮಂಗಳವಾರ ನಡೆದ ಬಿಜೆಪಿ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ರಾಜ್ಯ ಮತ್ತು ಕೇ‌ಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವುದರಿಂದ ಇಲ್ಲಿ ಬಿಜೆಪಿ ಶಾಸಕರಿದ್ದರೆ ಹೆಚ್ಚಿನ ಅನುದಾನ ದೊರೆಯುತ್ತದೆ ಎಂದರು.

ADVERTISEMENT

ನೀರಾವರಿ ಯೋಜನೆಗಳಿಂದ ವಂಚಿತವಾಗಿದ್ದು, ಅಧಿಕಾರ ಅನುಭವಿಸಿದವರಿಗೆ ಇದುವರೆಗೆ ಮದಲೂರು ಕೆರೆಗೆ ನೀರು ಹರಿಸಲು‌ ಸಾಧ್ಯವಾಗಿಲ್ಲ. ಬಿಜೆಪಿ ಸರ್ಕಾರ ಚುನಾವಣೆಯ ನಂತರ ನೀರು ಹರಿಸುತ್ತೇವೆ ಎಂದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಸಂಸದ ಪಿ.ಸಿ. ಮೋಹನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ. ಮಂಜುನಾಥ್, ತುಮುಲ್ ನಿರ್ದೇಶಕ ಎಸ್.ಆರ್.ಗೌಡ, ಬಿಜೆಪಿ ಅಭ್ಯರ್ಥಿ ಡಾ.ಸಿ.ಎಂ.ರಾಜೇಶ್ ಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.