ADVERTISEMENT

ಅಕ್ರಮ ಅಕ್ಕಿ ಕಳ್ಳ ಸಾಗಾಣಿಕೆ; ನಾಲ್ವರ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 12 ಮೇ 2019, 6:18 IST
Last Updated 12 ಮೇ 2019, 6:18 IST

ತುಮಕೂರು: ಬೆಂಗಳೂರು ಕಡೆಯಿಂದ ತುಮಕೂರು ಕಡೆಗೆ ಅಕ್ರಮವಾಗಿ ಅಂದಾಜು 210 ಚೀಲ ಅಕ್ಕಿಯನ್ನು ಮಿನಿ ಲಾರಿಯಲ್ಲಿ ಸಾಗಿಸುತ್ತಿದ್ದ ನಾಲ್ವರ ವಿರುದ್ಧ ಕ್ಯಾತ್ಸಂದ್ರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬೆಳಿಗ್ಗೆ 5.15ರ ವೇಳೆ ರಾಷ್ಟ್ರೀಯ ಹೆದ್ದಾರಿ 48ರ ಬಳಿಯ ಎಚ್ಎಂಎಸ್‌ಐಟಿ ಹತ್ತಿರ ಮಿನಿಲಾರಿಯನ್ನು ಕ್ಯಾತ್ಸಂದ್ರ ಠಾಣೆ ಪೊಲೀಸರು ಮತ್ತು ತುಮಕೂರು ನಗರದ ಆಹಾರ ನಿರೀಕ್ಷಕ ಡಿ.ನಾಗರಾಜು ಅವರು ವಶಪಡಿಸಿಕೊಂಡಿದ್ದಾರೆ.

ಅಕ್ಕಿ ಮಾಲೀಕರು ಯಾರು, ಲಾರಿ ಮಾಲೀಕ ಯಾರು ಎಂಬುದು ಗೊತ್ತಿಲ್ಲ. ಹೀಗಾಗಿ ಅಕ್ಕಿ ಮಾಲೀಕ, ಲಾರಿ ಮಾಲೀಕ, ಚಾಲಕ ಮತ್ತು ಕ್ಲೀನರ್ ಸೇರಿ ನಾಲ್ಕು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಕ್ಯಾತ್ಸಂದ್ರ ಠಾಣೆ ಸಬ್ ಇನ್‌ಸ್ಪೆಕ್ಟರ್ ಡಿ.ಎಲ್.ರಾಜು ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.