ತುಮಕೂರು: ಕುಣಿಗಲ್ ತಾಲ್ಲೂಕಿನ ಎಡೆಯೂರು ಗಡಿ ಭಾಗದ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹ ಮಾಡಿದ್ದ 2,700 ಚೀಲ ರಾಗಿಯನ್ನು ತಹಶೀಲ್ದಾರ್ ಮಹಾಬಲೇಶ್ವರ ನೇತೃತ್ವದ ಅಧಿಕಾರಿಗಳ ತಂಡ ಗುರುವಾರ ದಾಳಿ ನಡೆಸಿ ವಶಕ್ಕೆ ಪಡೆದಿದೆ.
ರಾಗಿ ಸಂಗ್ರಹಿಸಿದ ಬಗ್ಗೆ ಸ್ಪಷ್ಟ ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಡಿತರಕ್ಕೆ ವಿತರಣೆ ಅಗಬೇಕಿತ್ತೇ ಅಥವಾ ಬೆಂಬಲ ಬೆಲೆಯಲ್ಲಿ ಖರೀದಿಸಿದ ನಂತರ ಮಾರಾಟ ಮಾಡಲು ದಾಸ್ತಾನು ಮಾಡಲಾಗಿತ್ತೆ ಎಂಬ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.