ADVERTISEMENT

ನೀರಾವರಿ ಯೋಜನೆಗಳ ಅನುಷ್ಠಾನ | ರೈತ ಸಂಘದಿಂದ ತುಮಕೂರು ಡಿಸಿ ಕಚೇರಿಗೆ ಮುತ್ತಿಗೆ

​ಪ್ರಜಾವಾಣಿ ವಾರ್ತೆ
Published 26 ಜೂನ್ 2019, 8:35 IST
Last Updated 26 ಜೂನ್ 2019, 8:35 IST
   

ತುಮಕೂರು: ಹೇಮಾವತಿ ನಾಲಾ ಅಗಲೀಕರಣ, ತುಂಗಭದ್ರಾ ಮೇಲ್ದಂಡೆ, ಎತ್ತಿನಹೊಳೆ ಯೋಜನೆಗಳ ತುರ್ತು ಅನುಷ್ಠಾನ ಮಾಡಬೇಕು, ಭೂ ಸ್ವಾಧೀನ ಕಾಯ್ದೆಗೆ ಸರ್ಕಾರ ತಂದಿರುವ ತಿದ್ದುಪಡಿ ವಾಪಸ್ ಪಡೆಯಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಕರ್ನಾಟಕ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ರೈತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದರು.

ನಗರದ ಬಿಜಿಎಸ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಿದರು. ಜಿಲ್ಲೆಯ ಹಾಗೂ ಅಕ್ಕಪಕ್ಕದ ಜಿಲ್ಲೆಯ ರೈತರು ಭಾಗವಹಿಸಿದ್ದರು.

ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಜಿಲ್ಲಾ ಘಟಕ ಅಧ್ಯಕ್ಷ ಎ.ಗೋವಿಂದರಾಜು, ರಾಜ್ಯ ಪ್ರಧಾನ ಕಾರ್ಯದರ್ಶಿ ನೂಲೆನೂರು ಶಂಕರಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಸಿ.ಶಂಕರಪ್ಪ ನೇತೃತ್ವ ವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.