ADVERTISEMENT

ಸಾವು ಏರಿಕೆ, ಸೋಂಕು ಇಳಿಕೆ

3,470 ಸೋಂಕಿತರಲ್ಲಿ 2,462 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2020, 5:28 IST
Last Updated 18 ಆಗಸ್ಟ್ 2020, 5:28 IST
ಕೊಡಿಗೇನಹಳ್ಳಿ ಗ್ರಾಮದ ಬಸ್ ನಿಲ್ದಾಣದ ಸಮೀಪವಿರುವ ಅಂಗಡಿ ಮಾಲಿಕರೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದರಿಂದ ಸೋಮವಾರ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಆಶಾ ಕಾರ್ಯಕರ್ತೆಯರು ಸುತ್ತಮುತ್ತಲಿನ ಕೆಲ ಮನೆಗಳನ್ನು ಸೀಲ್‌ಡೌನ್ ಮಾಡಿದರು
ಕೊಡಿಗೇನಹಳ್ಳಿ ಗ್ರಾಮದ ಬಸ್ ನಿಲ್ದಾಣದ ಸಮೀಪವಿರುವ ಅಂಗಡಿ ಮಾಲಿಕರೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದರಿಂದ ಸೋಮವಾರ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಆಶಾ ಕಾರ್ಯಕರ್ತೆಯರು ಸುತ್ತಮುತ್ತಲಿನ ಕೆಲ ಮನೆಗಳನ್ನು ಸೀಲ್‌ಡೌನ್ ಮಾಡಿದರು   

ತುಮಕೂರು: ಜಿಲ್ಲೆಯಲ್ಲಿ ಸೋಮವಾರ ಹೊಸದಾಗಿ 50 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, 5 ಮಂದಿ ಮೃತಪಟ್ಟಿದ್ದಾರೆ. ಇದರಿಂದ ಸೋಂಕಿತರ ಸಂಖ್ಯೆ 3,470ಕ್ಕೆ, ಮೃತಪಟ್ಟವರ ಸಂಖ್ಯೆ 108ಕ್ಕೆ ಏರಿಕೆಯಾಗಿದೆ.

ಮೃತಪಟ್ಟವರಲ್ಲಿ ಇಬ್ಬರು ಪುರುಷರು, ಮೂವರು ಮಹಿಳೆಯರಿದ್ದಾರೆ. ತಿಪಟೂರು ತಾಲ್ಲೂಕು ಶಾರದಾನಗರ ಬಡಾವಣೆ 68 ವರ್ಷದ ಮಹಿಳೆ, ಪಾವಗಡ ತಾಲ್ಲೂಕು ವೈ.ಎನ್.ಹೊಸಕೋಟೆ 40 ವರ್ಷದ ವ್ಯಕ್ತಿ, ಗುಬ್ಬಿ ತಾಲ್ಲೂಕಿನ 37 ವರ್ಷದ ವ್ಯಕ್ತಿ, ತುಮಕೂರು ತಾಲ್ಲೂಕು ಅಂತರಸನಹಳ್ಳಿ ಗ್ರಾಮದ 75 ವರ್ಷದ ವೃದ್ಧೆ, ತುಮಕೂರು ಹೆಗಡೆ ಕಾಲೊನಿ 44 ವರ್ಷದ ಮಹಿಳೆ ಮೃತಪಟ್ಟಿದ್ದಾರೆ.

ಗುಣಮುಖ ಪ್ರಮಾಣ ಏರಿಕೆ: ಸೋಮವಾರ 103 ಮಂದಿ ಗುಣಮುಖರಾಗಿ ಮನೆಗಳಿಗೆ ಹಿಂದಿರುಗಿದರು. ಈವರೆಗೆ ದಾಖಲಾದ 3,470 ಮಂದಿ ಸೋಂಕಿತರಲ್ಲಿ ಈಗಾಗಲೇ 2,462 ಮಂದಿ ಗುಣಮುಖರಾಗಿದ್ದಾರೆ. 900 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಒಂದೆಡೆ ದಾಖಲೆ ಪ್ರಮಾಣದಲ್ಲಿ ಸೋಂಕಿತರು ಗುಣಮುಖ ರಾಗುತ್ತಿದ್ದರೆ, ಇನ್ನೊಂದೆಡೆ ಮೃತ ಪಡುತ್ತಿರುವವರ ಸಂಖ್ಯೆಯೂ ಏರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.08

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.