ADVERTISEMENT

ತುಮಕೂರು: ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್‌ಗೂ ಐಟಿ ಶಾಕ್

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2019, 7:12 IST
Last Updated 10 ಅಕ್ಟೋಬರ್ 2019, 7:12 IST
   

ತುಮಕೂರು: ಶಾಸಕ ಡಾ.ಜಿ.ಪರಮೇಶ್ವರ್ ಒಡೆತನದಎಸ್ಎಸ್ಐಟಿ ಎಂಜಿನಿಯರಿಂಗ್ ಕಾಲೇಜು ಮೇಲೆ ಐಟಿ ಅಧಿಕಾರಿಗಳು ಗುರುವಾರ ಮುಂಜಾನೆದಾಳಿ ನಡೆಸಿ, ದಾಖಲೆ ಪರಿಶೀಲನೆ ನಡೆಸಿದ್ದಾರೆ. ಒಟ್ಟು ಹನ್ನೆರೆಡು ಅಧಿಕಾರಿಗಳಿದ್ದತಂಡ ದಾಳಿ ನಡೆಸಿದೆ.

ಬೆಳಿಗ್ಗೆಕೊರಟಗೆರೆ ತಾಲ್ಲೂಕು ಜಂಪೇನಹಳ್ಳಿ ಗ್ರಾಮದ ಕೆರೆಗೆ ಪರಮೇಶ್ವರ ಅವರು ಬಾಗಿನ ಅರ್ಪಿಸಲು ತೆರಳಿದ್ದರು.

ಅಲ್ಲಿಗೆ ತೆರಳಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪರಮೇಶ್ವರ ಅವರನ್ನು ವಿಚಾರಿಸಿದ್ದಾರೆ. ಬಳಿಕ ಕೊರಟಗೆರೆ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳು ಪರಮೇಶ್ವರ ಅವರಿಂದ ಮಾಹಿತಿ ಪಡೆದಿದ್ದಾರೆ.
ಹದಿನೈದು ನಿಮಿಷ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಪರಮೇಶ್ವರ ಬೆಂಗಳೂರಿಗೆ ಅಧಿವೇಶನದಲ್ಲಿ ಪಾಲ್ಗೊಳ್ಳಲು ತೆರಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.