ADVERTISEMENT

ಇಂದಿನಿಂದ ಜಾತ್ರಾ ಮಹೋತ್ಸವ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2022, 5:55 IST
Last Updated 12 ಏಪ್ರಿಲ್ 2022, 5:55 IST

ಕುಣಿಗಲ್: ತಾಲ್ಲೂಕಿನ ಎಡೆಯೂರು ಹೋಬಳಿ ಬೀರಗಾನಹಳ್ಳಿಯ ಭ್ರಮರಾಂಬಿಕಾ ಹೊನ್ನಾದೇವಿ ಮತ್ತು ಉಮಾ ಮಹೇಶ್ವರಿ ಜಾತ್ರಾ ಮಹೋತ್ಸವವು ಇದೇ 12ರಿಂದ 14ರವರೆಗೆ ನಡೆಯಲಿದೆ.

12ರಂದು ಅಮ್ಮನವರಿಗೆ, ಆಭಯಾಂಜನೇಯ, ರಾಘವೇಂದ್ರ ಸ್ವಾಮಿಗೆ ವಿಶೇಷ ಅಭಿಷೇಕ ಪೂಜೆ, ಅಲಂಕಾರ, ಹೋಮ ನಡೆಯಲಿದೆ. ನಂತರ ಲಕ್ಷ್ಮಿವೆಂಕಟೇಶ್ವರ ಭಜನಾ ಮಂಡಳಿಯಿಂದ ಭಜನೆ ಮತ್ತು ಲಲಿತ ಸಹಸ್ರನಾಮ ಪಾರಾಯಣವಿದೆ. ಬಾಳೆಹೊನ್ನೂರು ಶಾಖಾ ಮಠದ ರೇಣುಕಾ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಪ್ರಮುಖ ಬೀದಿಗಳಲ್ಲಿ ಬ್ರಹ್ಮ ರಥೋತ್ಸವ ನಡೆಯಲಿದೆ. 14ರಂದು ಅಮ್ಮನವರ ಉತ್ಸವ ನಡೆಯಲಿದೆ ಎಂದು ದೇವಾಲಯದ ಸಮಿತಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT