ADVERTISEMENT

‘ಜಯಚಂದ್ರ– ರಾಜಣ್ಣ ಜೋಡೆತ್ತು’

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2020, 3:29 IST
Last Updated 4 ಅಕ್ಟೋಬರ್ 2020, 3:29 IST
ಶಿರಾದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಯುವ ಕಾಂಗ್ರೆಸ್ ರಾಜ್ಯ ಘಟಕದ ಉಪಾಧ್ಯಕ್ಷ ಅರ್.ರಾಜೇಂದ್ರ ಮಾತನಾಡಿದರು. ಟಿ.ಬಿ.ಜಯಚಂದ್ರ ಇದ್ದರು
ಶಿರಾದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಯುವ ಕಾಂಗ್ರೆಸ್ ರಾಜ್ಯ ಘಟಕದ ಉಪಾಧ್ಯಕ್ಷ ಅರ್.ರಾಜೇಂದ್ರ ಮಾತನಾಡಿದರು. ಟಿ.ಬಿ.ಜಯಚಂದ್ರ ಇದ್ದರು   

ಶಿರಾ: ಸರ್ಕಾರದಿಂದ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿ ಮಾಡುವ ವಿಚಾರದಲ್ಲಿ ಕಾಂಗ್ರೆಸ್ ಮುಖಂಡರಾದ ಟಿ.ಬಿ. ಜಯಚಂದ್ರ ಹಾಗೂ ಕೆ.ಎನ್. ರಾಜಣ್ಣ ಜೋಡೆತ್ತುಗಳಿದ್ದಂತೆ ಎಂದು ಕಾಂಗ್ರೆಸ್ ಯುವ ಘಟಕದ ಉಪಾಧ್ಯಕ್ಷ ಅರ್.ರಾಜೇಂದ್ರ ಹೇಳಿದರು.

ಪಕ್ಷದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ‘ಹಿಂದೆ ಟಿ.ಬಿ.ಜಯಚಂದ್ರ ಹಾಗೂ ಕೆ.ಎನ್.ರಾಜಣ್ಣ ಶಾಸಕರಾಗಿದ್ದಾಗ ಜಿಲ್ಲೆಯಲ್ಲಿ ಶಿರಾ ಮತ್ತು ಮಧುಗಿರಿ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದ್ದವು. ಮಧುಗಿರಿಗೆ ಎತ್ತಿನಹೊಳೆ ಮತ್ತು ಹೇಮಾವತಿ ನೀರು, ಶಿರಾಕ್ಕೆ ಹೇಮಾವತಿ, ಭದ್ರಾ ಮೇಲ್ದಂಡೆ ಮತ್ತು ಎತ್ತಿನಹೊಳೆ ಯೋಜನೆಯ ನೀರು ತರಲು ಇಬ್ಬರೂ ನಾಯಕರ ಪರಿಶ್ರಮವಿದೆ’ ಎಂದರು.

ಕಾಂಗ್ರೆಸ್ ಮುಖಂಡ ಟಿ.ಬಿ.ಜಯಚಂದ್ರ ಮಾತನಾಡಿ ‘ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ರಾಜಣ್ಣ ಮತ್ತು ನಾನು ರಾಮ ಲಕ್ಷ್ಮಣರಂತೆ ಇದ್ದೇವೆ. ಅನುದಾನ ತರುವ ವಿಚಾರದಲ್ಲಿ ಇಬ್ಬರು ಕೂಡ ಪೈಪೋಟಿಯಿಂದ ಕೆಲಸ ಮಾಡುತ್ತಿದ್ದೆವು’ ಎಂದರು.

ADVERTISEMENT

ಕುಂಚಿಟಿಗರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪಿ.ಎಸ್.ತ್ಯಾಗರಾಜ್ ಮಾತನಾಡಿ ‘ಜಯಚಂದ್ರ ಸೋತರೂ ಕ್ಷೇತ್ರದ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದ ರೀತಿಗೆ ಮಾರುಹೋಗಿದ್ದೇನೆ’ ಹೇಳಿದರು.

ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬರಗೂರು ನಟರಾಜ್, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಜಿ.ಎಸ್.ರವಿ, ಜಿ.ಎನ್.ಮೂರ್ತಿ, ಟಿ.ವಿನಯ್, ಗೋಣಿಹಳ್ಳಿ ದೇವರಾಜ್, ಗುಳಿಗೇನಹಳ್ಳಿ ನಾಗರಾಜ್, ಸಚಿನ್, ಹಲುಗುಂಡೇಗೌಡ, ಚಿದಾನಂದ್, ರಾಕೇಶ್ ಬಾಬು,ಎಂ.ಎನ್.ರಾಜು, ಲಕ್ಷ್ಮಿದೇವಮ್ಮ, ಮಾಗೋಡು ಶ್ರೀರಂಗಪ್ಪ, ಧರಣಿ ಕುಮಾರ್, ವಾಜರಹಳ್ಳಿ ರಮೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.