ADVERTISEMENT

ಜೆಡಿಎಸ್‌ ಸಮಾವೇಶ ಇಂದು

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2023, 6:09 IST
Last Updated 14 ಮಾರ್ಚ್ 2023, 6:09 IST

ತುರುವೇಕೆರೆ: ಪಟ್ಟಣದ ಗುರುಭವನ ಆವರಣದಲ್ಲಿ ಮಾಜಿ ಶಾಸಕ ಎಂ.ಟಿ. ಕೃಷ್ಣಪ್ಪ ಅವರ ನೇತೃತ್ವದಡಿ ಮಾರ್ಚ್‌ 14ರಂದು ಅಲ್ಪಸಂಖ್ಯಾತರ ಸಮಾವೇಶ ನಡೆಯಲಿದೆ ಎಂದು ತಾಲ್ಲೂಕು ಜೆಡಿಎಸ್‍ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಜಫ್ರುಲ್ಲಾ ಖಾನ್ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ಜೆಡಿಎಸ್‍ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಅಲ್ಪಸಂಖ್ಯಾತರ ಸಮಾವೇಶ ನಡೆಯುತ್ತಿದೆ. ಈ ಸಮಾವೇಶಕ್ಕೆ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ, ಮಹಿಳಾ ಘಟಕದ ಕಾರ್ಯಾಧ್ಯಕ್ಷೆ ನಜ್ಮಾ ನಜೀರ್, ನೌಶಿದ್ದು ಖಾನ್ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ನಯಾಜ್, ಅಸ್ಲಾಂ, ಯಾಸಿನ್, ನಯಾಜ್ ಪಾಷಾ, ಫಯಾಜ್
ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.