ತಿಪಟೂರು: ನಗರದ ಗಾಂಧಿ ನಗರದಲ್ಲಿ ಮಾರ್ಚ್ 19ರಂದು ತಾಲ್ಲೂಕು ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಸಮಾವೇಶ ಹಮ್ಮಿಕೊಂಡಿದ್ದು, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಭಾಗವಹಿಸಲಿದ್ದಾರೆ ಎಂದು ಜೆಡಿಎಸ್ ಮುಖಂಡ ಕೆ.ಟಿ. ಶಾಂತಕುಮಾರ್ ತಿಳಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು. ಜೆಡಿಎಸ್ ಅಧಿಕಾರಕ್ಕೆ ತರಲು ಎಚ್.ಡಿ. ಕುಮಾರಸ್ವಾಮಿ ಹಾಗೂ ಇಬ್ರಾಹಿಂ ರಾಜ್ಯದಾದ್ಯಂತ ಪ್ರಚಾರ ಕೈಗೊಂಡಿದ್ದಾರೆ. ತಿಪಟೂರಿಗೂ ಆಗಮಿಸುತ್ತಿದ್ದು, ಎಲ್ಲಾ ವರ್ಗದ ಜನರ ಬಳಿಗೆ ತೆರಳಿ ಪಕ್ಷದ ಮುಂದಿನ ಯೋಜನೆಗಳ ಬಗ್ಗೆ ತಿಳಿಸುವುದೇ ಮುಖ್ಯ ಉದ್ದೇಶವಾಗಿದೆ ಎಂದರು.
ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಗುರುಮೂರ್ತಿ ಮಾತನಾಡಿ, ತಾಲ್ಲೂಕಿನಲ್ಲಿಯೂ ಜೆಡಿಎಸ್ ಅಭ್ಯರ್ಥಿ ಕೆ.ಟಿ. ಶಾಂತಕುಮಾರ್ ಅವರಿಗೆ ಉತ್ತಮ ಜನ ಬೆಂಬಲವಿದ್ದು ಗೆಲ್ಲುವ ಭರವಸೆಯಿದೆ. ಈ ನಿಟ್ಟಿನಲ್ಲಿ ಎಲ್ಲಾ ವರ್ಗದ ಜನರ ಬಳಿಗೆ ತಲುಪಲು ಸಮಾವೇಶ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಸೂಗೂರು ಶಿವಸ್ವಾಮಿ, ಅಲ್ಪಸಂಖ್ಯಾತರ ಘಟಕದ ಮಾಜಿ ಅಧ್ಯಕ್ಷ ಫೈರೋಜ್ ಖಾನ್, ಸದ್ದಾಂ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.