ತುಮಕೂರು: ಕಾರ್ಮಿಕ ಸಂಘಟನೆಗಳ ಒಕ್ಕೂಟವು ಕರೆ ನೀಡಿರುವ ಜ.8ರ ‘ಭಾರತ್ ಬಂದ್’ ಮುಷ್ಕರಕ್ಕೆ ಜೆಡಿಎಸ್ನ ತುಮಕೂರು ಜಿಲ್ಲಾ ಘಟಕವೂ ಬೆಂಬಲ ಸೂಚಿಸಿದೆ.
ದೇಶದ ಆರ್ಥಿಕ ಹಿಂಜರಿತಕ್ಕೆ ಕಾರಣ ಆಗಿರುವ ಕೇಂದ್ರ ಸರ್ಕಾರದ ನೀತಿಗಳನ್ನು ಬದಲಿಸಬೇಕು. ಈ ನೀತಿಗಳಿಂದ ಉದ್ಯೋಗ ಕಳೆದುಕೊಳ್ಳುತ್ತಿರುವ ಕಾರ್ಮಿಕರು ಮತ್ತು ಉದ್ಯಮಗಳ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಬೇಕು. ಉದ್ಯೋಗ ಸೃಷ್ಠಿಗೆ ಪೂರಕವಾದ ನೀತಿಗಳನ್ನು ರೂಪಿಸಬೇಕು ಎಂಬ ಒತ್ತಾಯಕ್ಕಾಗಿ ಈ ಮುಷ್ಕರ ನಡೆಯುತ್ತಿದೆ. ಇದರಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಸಕ್ರಿಯರಾಗಿ ಭಾಗವಹಿಸಲಿದ್ದಾರೆ ಎಂದು ಜಿಡಿಎಸ್ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಆರ್.ಜಿ.ಆಂಜಿನಪ್ಪ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.