ADVERTISEMENT

ಆಭರಣ ಮಳಿಗೆಯಲ್ಲಿ ಕಳ್ಳತನ; ಐದು ಮಂದಿ ಬಂಧನ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2020, 7:58 IST
Last Updated 7 ಡಿಸೆಂಬರ್ 2020, 7:58 IST
ಬಂಧನ (ಸಾಂದರ್ಭಿಕ ಚಿತ್ರ)
ಬಂಧನ (ಸಾಂದರ್ಭಿಕ ಚಿತ್ರ)   

ತುಮಕೂರು: ನಗರದ ಆಭರಣ ಅಂಗಡಿಯೊಂದರಲ್ಲಿ ₹ 1.30 ಕೋಟಿ ಮೌಲ್ಯದ 2.470 ಕೆ.ಜಿ ಚಿನ್ನಾಭರಣ ಕಳ್ಳತನ ಮಾಡಿದ ಆರೋಪದ ಮೇಲೆ ಐದು ಮಂದಿಯನ್ನು ನಗರ ಪೊಲೀಸರು ಬಂಧಿಸಿದ್ದಾರೆ.

ತುಮಕೂರಿನ ವಿನೋಬ ನಗರದ ಮೊಹಮದ್, ಗುಬ್ಬಿಯ ಮಹೇಶ್, ಮೀನಾಕ್ಷಿ, ಹೆಬ್ಬೂರಿನ ರುಕ್ಸಾನ, ಕೇರಳದ ಪೆರಿಗೆರ ಗ್ರಾಮದ ರಿತೇಶ್ ಕುರುಪ್ ಬಂಧಿತರು.

ಮೊಹಮದ್ ಮತ್ತು ರಿತೇಶ್ ಕುರುಪ್ ಆಭರಣ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ಇಬ್ಬರಿಗೆ ಉಳಿದ ಆರೋಪಿಗಳು ನೆರವಾಗಿದ್ದರು. ಆರೋಪಿಗಳಿಂದ 1.854 ಗ್ರಾಂ ಚಿನ್ನಾಭರಣ ಹಾಗೂ ₹ 4.05 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಪ್ರಕರಣ ಪತ್ತೆಗೆ ನಗರ ಠಾಣೆ ಸಿಪಿಐ ಬಿ.ನವೀನ್ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.