ADVERTISEMENT

ನಾಳೆ‌ ಶಿರಾದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2023, 6:14 IST
Last Updated 25 ಡಿಸೆಂಬರ್ 2023, 6:14 IST
ರಘುನಾಥ ಚ.ಹ.
ರಘುನಾಥ ಚ.ಹ.   

ಶಿರಾ: ನಗರದ ವಿವೇಕಾನಂದ ಕ್ರೀಡಾಂಗಣದಲ್ಲಿ ಡಿಸೆಂಬರ್ 26ರಂದು ಕಸಾಪ ಶಿರಾ ತಾಲ್ಲೂಕು ಘಟಕದಿಂದ 6ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ.

ಸಮ್ಮೇಳನದ ಸರ್ವಾಧ್ಯಕ್ಷರಾಗಿ ‘ಸುಧಾ’ ವಾರಪತ್ರಿಕೆಯ ಕಾರ್ಯನಿರ್ವಾಹಕ‌ ಸಂಪಾದಕ ರಘುನಾಥ ಚ.ಹ ಅವರು ಆಯ್ಕೆಯಾಗಿದ್ದಾರೆ.

26ರಂದು ಬೆಳಿಗ್ಗೆ 7.30ಕ್ಕೆ ತಹಶೀಲ್ದಾರ್ ಡಾ.ದತ್ತಾತ್ರೇಯ ಗಾದ ಅವರು ರಾಷ್ಟ್ರಧ್ವಜವನ್ನು, ಸಹಾಯಕ ಕೃಷಿ ನಿರ್ದೇಶಕ ಎಚ್.ನಾಗರಾಜು ಅವರು ನಾಡಧ್ವಜವನ್ನು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಸಿ‌.ಎನ್.ಕೃಷ್ಣಪ್ಪ ಪರಿಷತ್ ಧ್ವಜಾರೋಹಣ ನೆರವೇರಿಸಲಿದ್ದಾರೆ.

ADVERTISEMENT

ನಗರದ ಅಂಬೇಡ್ಕರ್ ವೃತ್ತದಿಂದ (ಐ.ಬಿ.ವೃತ್ತ) ಸಮ್ಮೇಳನಾಧ್ಯಕ್ಷರ ಮೆರವಣಿಗೆ ಪ್ರಾರಂಭವಾಗಲಿದೆ. ಅಂಬೇಡ್ಕರ್ ವೃತ್ತದಿಂದ ಭಗವಾನ್ ವೃತ್ತ, ಹೊಸ ಬಸ್‌ ನಿಲ್ದಾಣ ರಸ್ತೆ, ರಾಷ್ಟ್ರೀಯ ಹೆದ್ದಾರಿ ಮೂಲಕ ವಿವಿಧ ಕಲಾ ತಂಡಗಳೊಂದಿಗೆ ಪ್ರಧಾನ ವೇದಿಕೆಗೆ ಸಮ್ಮೇಳನಾಧ್ಯಕ್ಷ ರಘುನಾಥ ಚ.ಹ ಅವರನ್ನು ಕರೆ ತರಲಾಗುವುದು.

ಕಸ್ತೂರಿ ರಂಗಪ್ಪ ನಾಯಕರ ವೇದಿಕೆಯಲ್ಲಿ ನಡೆಯಲಿರುವ ಸಮ್ಮೇಳನದ ಅಧ್ಯಕ್ಷತೆಯನ್ನು ಶಾಸಕ ಟಿ.ಬಿ.ಜಯಚಂದ್ರ ವಹಿಸಲಿದ್ದು, ಸಾಹಿತಿ ಬರಗೂರು ರಾಮಚಂದ್ರಪ್ಪ ಉದ್ಘಾಟಿಸಲಿದ್ದಾರೆ.

ಶಾಸಕ ಟಿ‌.ಬಿ.ಜಯಚಂದ್ರ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.