ADVERTISEMENT

ತುಮಕೂರು: ಪರಮೇಶ್ವರ, ಜಯಚಂದ್ರ ಸೇರಿ 8 ಮಂದಿಗೆ ಕಾಂಗ್ರೆಸ್ ಟಿಕೆಟ್

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2023, 7:21 IST
Last Updated 25 ಮಾರ್ಚ್ 2023, 7:21 IST
   

ತುಮಕೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಮೊದಲ ಪಟ್ಟಿಯಲ್ಲಿ ಜಿಲ್ಲೆಯ 11 ಕ್ಷೇತ್ರಗಳಲ್ಲಿ 8 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.

8 ಕ್ಷೇತ್ರಗಳಿಗೆ ಬಹುತೇಕ ಒಬ್ಬರ ಹೆಸರನ್ನು ಅಂತಿಮಗೊಳಿಸಲಾಗಿತ್ತು. ಕೊರಟಗೆರೆ ಕ್ಷೇತ್ರದಿಂದ ಶಾಸಕ ಡಾ.ಜಿ.ಪರಮೇಶ್ವರ, ಶಿರಾದಿಂದ ಟಿ.ಬಿ.ಜಯಚಂದ್ರ, ಮಧುಗಿರಿಯಿಂದ ಕೆ.ಎನ್.ರಾಜಣ್ಣ, ಪಾವಗಡದಿಂದ ಶಾಸಕ ವೆಂಕಟರಮಣಪ್ಪ ಪುತ್ರ ವೆಂಕಟೇಶ್, ಚಿಕ್ಕನಾಯಕನಹಳ್ಳಿಯಿಂದ ಕಿರಣ್‌ಕುಮಾರ್, ತಿಪಟೂರಿನಿಂದ ಕೆ.ಷಡಾಕ್ಷರಿ, ಕುಣಿಗಲ್‌ನಿಂದ ಶಾಸಕ ಡಾ.ರಂಗನಾಥ್, ತುರುವೇಕೆರೆ ಕ್ಷೇತ್ರದಿಂದ ಕಾಂತರಾಜು ಅವರಿಗೆ ಟಿಕೆಟ್ ನೀಡಲಾಗಿದೆ.

ತುಮಕೂರು ನಗರ, ತುಮಕೂರು ಗ್ರಾಮಾಂತರ, ಗುಬ್ಬಿ ಕ್ಷೇತ್ರಕ್ಕೆ ಹೆಸರು ಪ್ರಕಟಿಸಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.