ತುಮಕೂರು: ಕರ್ನಾಟಕ ಬಂದ್ ಪ್ರಯುಕ್ತ ನಗರದ ಟೌನ್ಹಾಲ್ನಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿದ್ದಾರೆ. ಈಗ ಬೈಕ್ ರ್ಯಾಲಿಗೆ ಮುಂದಾಗಿದ್ದಾರೆ.
ನಗರದಲ್ಲಿ ಅಂಗಡಿಗಳು ಬಂದ್ ಆಗಿವೆ. ಬೈಕ್ ರ್ಯಾಲಿಗೆ ಪೊಲೀಸರು ತಡೆ ನೀಡಿದ್ದು, ಪೊಲೀಸರು ಮತ್ತು ಪ್ರತಿಭಟನಕಾರರ ನಡುವೆ ಜಟಾಪಟಿ ನಡೆಯುತ್ತಿದೆ.
ಬೈಕ್ ರ್ಯಾಲಿಗೆ ಅನುಮತಿ ನೀಡದ ಕಾರಣ ಪೊಲೀಸರು ಮತ್ತು ಪ್ರತಿಭಟನಕಾರರ ನಡುವೆ ಜಟಾಪಟಿ ಹೆಚ್ಚಿದೆ. ಈ ವೇಳೆ ಪ್ರತಿಭಟನ ನಡೆಸುತ್ತಿದ್ದವರನ್ನು ಬಂಧಿಸಲಾಯಿತು.
ಪೊಲೀಸರು ಮತ್ತು ಸರ್ಕಾರದ ವಿರುದ್ಧ ಪ್ರತಿಭಟನಕಾರರು ಘೋಷಣೆ ಕೂಗಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.