ADVERTISEMENT

ತುಮಕೂರು: ಕರ್ನಾಟಕ ಬಂದ್ ಪ್ರಯುಕ್ತ ಬೈಕ್ ರ್ಯಾಲಿ ಆರಂಭ, ಪೊಲೀಸರಿಂದ ತಡೆ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2020, 6:03 IST
Last Updated 28 ಸೆಪ್ಟೆಂಬರ್ 2020, 6:03 IST
   

ತುಮಕೂರು: ಕರ್ನಾಟಕ ಬಂದ್ ಪ್ರಯುಕ್ತ ನಗರದ ಟೌನ್‌ಹಾಲ್‌ನಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿದ್ದಾರೆ. ಈಗ ಬೈಕ್ ರ್ಯಾಲಿಗೆ ಮುಂದಾಗಿದ್ದಾರೆ.

ನಗರದಲ್ಲಿ ಅಂಗಡಿಗಳು ಬಂದ್ ಆಗಿವೆ. ಬೈಕ್ ರ್ಯಾಲಿಗೆ ಪೊಲೀಸರು ತಡೆ ನೀಡಿದ್ದು, ಪೊಲೀಸರು ಮತ್ತು ಪ್ರತಿಭಟನ‌ಕಾರರ ನಡುವೆ ಜಟಾಪಟಿ ನಡೆಯುತ್ತಿದೆ.

ಬೈಕ್ ರ್ಯಾಲಿಗೆ ಅನುಮತಿ ನೀಡದ ಕಾರಣ ಪೊಲೀಸರು ಮತ್ತು ಪ್ರತಿಭಟನಕಾರರ ನಡುವೆ ಜಟಾಪಟಿ ಹೆಚ್ಚಿದೆ. ಈ ವೇಳೆ ಪ್ರತಿಭಟನ ನಡೆಸುತ್ತಿದ್ದವರನ್ನು ಬಂಧಿಸಲಾಯಿತು.

ADVERTISEMENT

ಪೊಲೀಸರು ಮತ್ತು ಸರ್ಕಾರದ ವಿರುದ್ಧ ಪ್ರತಿಭಟನಕಾರರು ಘೋಷಣೆ ಕೂಗಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.