ADVERTISEMENT

ತುಮಕೂರು: ಪರಿಶಿಷ್ಟರ ಮನೆಯಲ್ಲಿ ಉಪಹಾರ ಸೇವಿಸಿದ ಸಚಿವ ಆರ್.ಅಶೋಕ್

​ಪ್ರಜಾವಾಣಿ ವಾರ್ತೆ
Published 19 ಜೂನ್ 2022, 5:40 IST
Last Updated 19 ಜೂನ್ 2022, 5:40 IST
ವಿನೋದ್ ಅವರ ಮನೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಉಪಹಾರ ಸೇವಿಸಿದರು.
ವಿನೋದ್ ಅವರ ಮನೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಉಪಹಾರ ಸೇವಿಸಿದರು.   

ತುಮಕೂರು: ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಗ್ರಾಮದ ಪರಿಶಿಷ್ಟ ಸಮುದಾಯಕ್ಕೆ ಸೇರಿದ ವಿನೋದ್ ಅವರ ಮನೆಯಲ್ಲಿ ಭಾನುವಾರ ಬೆಳಿಗ್ಗೆ ಕಂದಾಯ ಸಚಿವ ಆರ್.ಅಶೋಕ್ ಉಪಹಾರ ಸೇವಿಸಿದರು.

ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದ ನಿಮಿತ್ತ ಮಾಯಸಂದ್ರದಲ್ಲಿ ವಾಸ್ತವ್ಯ ಹೂಡಿರುವ ಸಚಿವರು ಬೆಳಿಗ್ಗೆ ವಿನೋದ್ ಅವರ ಮನೆಗೆ ಭೇಟಿ ನೀಡಿ ಅಕ್ಕಿರೊಟ್ಟಿ, ಹುಚ್ಚೆಳ್ಳು ಚಟ್ನಿ, ಕೇಸರಿಬಾತ್, ಉಪ್ಪಿಟ್ಟು, ಚಿತ್ರಾನ್ನ ಸೇವಿಸಿದರು.

ಮಾಯಸಂದ್ರಕ್ಕೆ ಘೋಷಿಸಲಾದ ₹1 ಕೋಟಿ‌ ಅನುದಾನದ ಪೈಕಿ ₹25 ಲಕ್ಷ ಗ್ರಾಮದ ದಲಿತ ಕೇರಿಯ ಸಮಗ್ರ ಸಿ.ಸಿ.ರಸ್ತೆ ನಿರ್ಮಾಣಕ್ಕೆ ನೀಡಲಾಗುವುದು ಎಂದರು.

ಸಾರ್ವಜನಿಕರಿಂದ ಅಹವಾಲು‌ ಆಲಿಸಿ,‌ ಅರ್ಜಿಗಳನ್ನು‌ ಪರಿಶೀಲಿಸಿದರು. ತ್ವರಿತ‌ವಾಗಿ ಇತ್ಯರ್ಥಗೊಳಿಸುವಂತೆ ತಹಶೀಲ್ದಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕ ಮಸಾಲೆ ಜಯರಾಂ, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಉಪವಿಭಾಗಾಧಿಕಾರಿ ವಿ.ಅಜಯ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.