ADVERTISEMENT

ದೆಹಲಿಗೆ ಹೋಗಿದ್ದ ಯುವಕರು: ಆತಂಕ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2020, 17:05 IST
Last Updated 1 ಏಪ್ರಿಲ್ 2020, 17:05 IST

ಕೊರಟಗೆರೆ: ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ಮಾರ್ಚ್‌ 13ರಿಂದ ಮಾರ್ಚ್‌ 15ರವರೆಗೆ ನಡೆದಿದ್ದ ಧಾರ್ಮಿಕ ಸಭೆಯಲ್ಲಿ ಪಟ್ಟಣದ ಮೂವರು ಮುಸ್ಲಿಂ ಯುವಕರು ಭಾಗವಹಿಸಿ ವಾಪಸಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಬುಧವಾರ ಹರಿದಾಡಿದ್ದು, ಜನರನ್ನು ಆತಂಕಕ್ಕೆ ದೂಡಿದೆ.

ದೆಹಲಿ ಧಾರ್ಮಿಕ ಕಾರ್ಯಕ್ರಮಕ್ಕೆ ಹೋಗಿದ್ದ ಯುವಕರು ತಮ್ಮ ಫೇಸ್‌ಬುಕ್ ಖಾತೆಗಳಲ್ಲಿ ದೆಹಲಿಗೆ ಹೋಗಿದ್ದ ಹಾಗೂ ವಾಪಸ್ ಬಂದದ್ದನ್ನು ಫೋಟೊ ಸಮೇತ ಹಾಕಿದ್ದನ್ನು ಕೆಲವರು ಸ್ಕ್ರೀನ್ ಶಾಟ್ ಮಾಡಿ ವಾಟ್ಸ್‌ಆಪ್‌ ಹಾಗೂ ಫೇಸ್‌ಬುಕ್ ಖಾತೆಗಳಲ್ಲಿ ಹಾಕಿದ್ದರು.

ಬೆಳಿಗ್ಗೆ ಈ ವಿಷಯ ಎಲ್ಲೆಡೆ ಹಬ್ಬುತ್ತಿದ್ದಂತೆ ತಾಲ್ಲೂಕು ಆಡಳಿತದ ಅಧಿಕಾರಿಗಳು ಯುವಕರನ್ನು ಪತ್ತೆ ಹಚ್ಚಿ ವೈದ್ಯಕೀಯ ತಪಾಸಣೆ ನಡೆಸಿದರು.

ADVERTISEMENT

‘ಕೊರೊನಾ ವೈರಸ್‌ನ ಲಕ್ಷಣಗಳು ಕಂಡು ಬಂದಿಲ್ಲ. ಅವರನ್ನು ಹೋಂ ಕ್ವಾರಂಟೈನ್‌ನಲ್ಲಿ ಇಡಲಾಗಿದೆ. ಜನರು ಆತಂಕ ಪಡಬೇಕಿಲ್ಲ’ ಎಂದು ತಹಶೀಲ್ದಾರ್ ಗೋವಿಂದ ರಾಜು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.