ADVERTISEMENT

ಸಾರಿಗೆ ನೌಕರರ ಮುಷ್ಕರ: ತುಮಕೂರು ವಿಶ್ವವಿದ್ಯಾಲಯದ ಪರೀಕ್ಷೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2025, 5:05 IST
Last Updated 5 ಆಗಸ್ಟ್ 2025, 5:05 IST
ತುಮಕೂರು ವಿಶ್ವವಿದ್ಯಾಲಯ
ತುಮಕೂರು ವಿಶ್ವವಿದ್ಯಾಲಯ   

ತುಮಕೂರು: ಕೆಎಸ್ಆರ್‌ಟಿಸಿ ನೌಕರರ ಮುಷ್ಕರ ಕಾರಣದಿಂದ ತುಮಕೂರು ವಿಶ್ವವಿದ್ಯಾಲಯದ ಪರೀಕ್ಷೆ ಮುಂದೂಡಲಾಗಿದೆ.

ಮಂಗಳವಾರ ನಡೆಯಬೇಕಾಗಿದ್ದ ಎಲ್ಲ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮರು ನಿಗದಿಯಾದ ದಿನಾಂಕಗಳನ್ನು ಮುಂದೆ ತಿಳಿಸಲಾಗುವುದು ಎಂದು ಪರೀಕ್ಷಾಂಗ ಕುಲ ಸಚಿವರು ತಿಳಿಸಿದ್ದಾರೆ.

'ಮುಂಚಿತವಾಗಿ ಪರೀಕ್ಷೆ ಮುಂದೂಡಬೇಕಿತ್ತು. ವಿದ್ಯಾರ್ಥಿಗಳು ಕಾಲೇಜಿಗೆ ಬಂದ ನಂತರ ಪರೀಕ್ಷೆ ಮುಂದೂಡಲಾಗಿದೆ‌ ಎನ್ನುತ್ತಿದ್ದಾರೆ. ಹಳ್ಳಿ ಕಡೆಯಿಂದ ಕಷ್ಟಪಟ್ಟು ಕಾಲೇಜಿಗೆ ಬಂದಿದ್ದೇವೆ. ಮುಂಚೆಯೇ ತಿಳಿಸಿದ್ದರೆ ನಮ್ಮ ಪರದಾಟ ತಪ್ಪುತ್ತಿತ್ತು' ಎಂದು ವಿದ್ಯಾರ್ಥಿ ಪ್ರವೀಣ್ ಪ್ರತಿಕ್ರಿಯಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.