ADVERTISEMENT

ತುಮಕೂರು | ಕುಮಾರ್ ಆಚಾರ್ ಸಾವು: ಸೂಕ್ತ ತನಿಖೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2023, 14:02 IST
Last Updated 9 ನವೆಂಬರ್ 2023, 14:02 IST
ತುರುವೇಕೆರೆಯಲ್ಲಿ ಕೆಪಿಸಿಸಿ ಒಬಿಸಿ ಘಟಕದ ಉಪಾಧ್ಯಕ್ಷೆ ಡಾ.ಪವಿತ್ರಾ ಆರ್.ಪ್ರಭಾಕರ್ ರೆಡ್ಡಿ ಅವರು ಮೃತ ಕುಮಾರ್ ಆಚಾರ್ ಕುಟುಂಬಕ್ಕೆ ಧನಸಹಾಯ ನೀಡಿದರು
ತುರುವೇಕೆರೆಯಲ್ಲಿ ಕೆಪಿಸಿಸಿ ಒಬಿಸಿ ಘಟಕದ ಉಪಾಧ್ಯಕ್ಷೆ ಡಾ.ಪವಿತ್ರಾ ಆರ್.ಪ್ರಭಾಕರ್ ರೆಡ್ಡಿ ಅವರು ಮೃತ ಕುಮಾರ್ ಆಚಾರ್ ಕುಟುಂಬಕ್ಕೆ ಧನಸಹಾಯ ನೀಡಿದರು   

ತುರುವೇಕೆರೆ: ‘ತಾಲ್ಲೂಕಿನ ಕೆ.ಮಾವಿನಹಳ್ಳಿಯ ಕುಮಾರ್ ಆಚಾರ್ ಪೊಲೀಸ್ ವಶದಲ್ಲಿರುವಾಗ ಸಾವನ್ನಪ್ಪಿರುವ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ತನಿಖೆ ನಡೆಸಿ, ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು’ ಎಂದು ಕೆಪಿಸಿಸಿ ಒಬಿಸಿ ಘಟಕದ ರಾಜ್ಯ ಉಪಾಧ್ಯಕ್ಷೆ ಡಾ.ಪವಿತ್ರಾ ಆರ್.ಪ್ರಭಾಕರ್ ರೆಡ್ಡಿ ತಿಳಿಸಿದರು.

ತಾಲ್ಲೂಕಿನ ಕೆ.ಮೇಲನಹಳ್ಳಿಯಲ್ಲಿರುವ ಕುಮಾರ್ ಆಚಾರ್ ಕುಟುಂಬದ ಸದಸ್ಯರನ್ನು ಬುಧವಾರ ಭೇಟಿ ಮಾಡಿದ ನಂತರ ಮಾತನಾಡಿದರು.

ಕುಮಾರ್ ಆಚಾರ್ ಸಾವು ಪೊಲೀಸ್ ದೌರ್ಜನ್ಯದಿಂದಲೇ ಆಗಿದೆ ಎನ್ನುವುದು ಮೇಲ್ನೋಟಕ್ಕೆ ತಿಳಿದಿದೆ. ಮೃತರ ಕುಟುಂಬ ಸಂಕಷ್ಟದಲ್ಲಿದೆ ಎಂದರು.

ADVERTISEMENT

ಶೀಘ್ರ ಸಿಒಡಿ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಹಾಗೂ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದರು.

ರಾಜ್ಯ ಕೆಪಿಸಿಸಿ ಅಸಂಘಟಿತ ಕಾರ್ಮಿಕರ ಘಟಕದ ಪ್ರಧಾನ ಕಾರ್ಯದರ್ಶಿ ಮಾ.ನ.ಗುರುದತ್, ರಾಜ್ಯ ಒಬಿಸಿಯ ಉಪಾಧ್ಯಕ್ಷ ಚಿಕ್ಕನಾಯನಹಳ್ಳಿಯ ಡಾ.ವಿಜಯರಾಘವೇಂದ್ರ, ತಾಲ್ಲೂಕು ಕಾಂಗ್ರೆಸ್‌ನ ಒಬಿಸಿ ಘಟಕದ ಅಧ್ಯಕ್ಷ ಸ್ಟುಡಿಯೊ ಮಹೇಂದ್ರ, ಪುಟ್ಟರಾಜ್ ಹಾಗೂ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.