ಕುಣಿಗಲ್: ತಾಲ್ಲೂಕಿನ ಸಂತೆಮಾವತ್ತೂರು ಮೋದುರ ರಾಸ್ತೆ ಕಟ್ಟೆಯಲ್ಲಿ ಯುವತಿ ಕೊಲೆ ಮಾಡಲಾಗಿದೆ. ಯುವತಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ.
ಯುವತಿ ಪೆಟ್ರೋಲ್ ಬಂಕ್ನಲ್ಲಿ ಸಿಬ್ಬಂದಿ ಧರಿಸುವ ಉಡುಪು ಧರಿಸಿದ್ದು, ಯಾವುದೋ ಪಟ್ರೋಲ್ ಬಂಕ್ನಲ್ಲಿ ಕೆಲಸ ಮಾಡುತ್ತಿದ್ದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ
ಬೆಳಿಗ್ಗೆ ಮೋದೂರು ರಸ್ತೆಯಲ್ಲಿ ಗ್ರಾಮಸ್ಥರು ತೆರಳುವಾಗ ಯುವತಿ ಕೊಲೆಯಾಗಿರುವುದು ಗೊತ್ತಾಗಿದೆ.ಹುಲಿಯೂರುದುರ್ಗ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.