ಕುಣಿಗಲ್: ಪುರಸಭಾ ಅಧಿಕಾರಿಗಳು ಪೌರಕಾರ್ಮಿಕರಿಂದ ನಿಗದಿತ ಅವಧಿಗಿಂತ ಹೆಚ್ಚಿನ ಅವಧಿಯಲ್ಲಿ ದುಡಿಸಿಕೊಳ್ಳುತ್ತಿದ್ದು, ಉಪಾಧ್ಯಕ್ಷ ಶ್ರೀನಿವಾಸ್, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ್, ಕಾರ್ಮಿಕ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಮೀನಾಕ್ಷಿ, ಮುಖ್ಯಾಧಿಕಾರಿ ಕೃಷ್ಣ ಅವರು ಪುರಸಭೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 19 ಪೌರಕಾರ್ಮಿಕರನ್ನು ಬೆಳಗ್ಗೆ 5.30ರಿಂದ ಸಂಜೆ 6.30ರವರೆಗೆ ಸತತ 14 ಗಂಟೆ ವಿಶ್ರಾಂತಿ ನೀಡದೆ ಕೆಲಸ ಮಾಡಿಸುತ್ತಿದ್ದಾರೆ. ಸರ್ಕಾರಿ ಕಾಯ್ದೆಗಳಿಗೆ ವಿರುದ್ಧವಾಗಿ ದುಡಿಸಿಕೊಳ್ಳುತ್ತಿದ್ದು, ಕ್ರಮ ತೆಗೆದುಕೊಳ್ಳುವಂತೆ ದೂರು ನೀಡಿ, ಗುತ್ತಿಗೆ ಆದಾರದ ಕಾರ್ಮಿಕರನ್ನು ಸಾಮಾನ್ಯ ನೌಕರರೆಂದು ಪರಿಗಣಿಸಿ ನಿರ್ದಿಷ್ಟ ಸಮಯದ ಕೆಲಸ ನೀಡಲು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.