ತುರುವೇಕೆರೆ: ‘ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ತಾಲ್ಲೂಕಿನ ಗ್ರಾಮೀಣ ಪ್ರದೇಶದ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಹೆಚ್ಚಿನ ಒತ್ತು ನೀಡಲಾಗುವುದು’ ಎಂದು ಶಾಸಕ ಮಸಾಲ ಜಯರಾಂ ತಿಳಿಸಿದರು.
ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಸೊರವನಹಳ್ಳಿ- ಸೀಗೆಹಳ್ಳಿ ರಸ್ತೆಯ ಮಣೆಚಂಡೂರುವರೆಗೂ ₹ 200 ಲಕ್ಷ ವೆಚ್ಚದ ಡಾಂಬರು ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು
ಮಾತನಾಡಿದರು.
ಮಾಯಸಂದ್ರ ಹೋಬಳಿಯ ಬಿಜೆಪಿ ಅಧ್ಯಕ್ಷ ಯಶೋಧರ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ಉಪಾಧ್ಯಕ್ಷೆ ಲಕ್ಷ್ಮಮ್ಮ, ಸದಸ್ಯರಾದ ರಮೇಶ್, ಚೇತನ್, ಉನಿಸ್, ಶ್ರೀನಿವಾಸ್, ಶ್ಯಾಮಲಾ, ಮುಖಂಡರಾದ ಮುರುಳಿ, ಪ್ರಭು, ಮಹಾವೀರ ಬಾಬು, ಸುರೇಶ್, ಸೋಮಶೇಖರ್, ಸುರೇಶ್, ದಿನೇಶ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.