ADVERTISEMENT

ತುಮಕೂರಿನ ಕೊರಟಗೆರೆಯಲ್ಲಿ ಚಿರತೆ ದಾಳಿ: ಕರು ಸಾವು

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2022, 5:18 IST
Last Updated 5 ಆಗಸ್ಟ್ 2022, 5:18 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ತುಮಕೂರು: ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿ, ವಜ್ಜನಕುರಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೋರಗಾನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ಕರು ಸಾವನ್ನಪ್ಪಿದೆ.

ಮೋರಗಾನಹಳ್ಳಿ ಗ್ರಾಮದ ವಿಶ್ವಣ್ಣ ಎಂಬುವರಿಗೆ ಸೇರಿದ ಕರು.‌ ಮನೆಯ ಪಕ್ಕದ ಕೊಟ್ಟಿಗೆಯಲ್ಲಿ ಕರುವನ್ನು ಕಟ್ಟಲಾಗಿತ್ತು. ಗುರುವಾರ ತಡರಾತ್ರಿ ದಾಳಿ‌ ನಡೆಸಿರುವ ಚಿರತೆ ಕಟ್ಟಿರುವ ಕರುವನ್ನು ಎತ್ತೊಯ್ಯಲಾಗದೆ ಇದ್ದ ಜಾಗದಲ್ಲೆ ತಿಂದು ಹಾಕಿದೆ.

ಗ್ರಾಮದ ಮಧ್ಯ ಭಾಗದಲ್ಲಿನ ಕೊಟ್ಟಿಗೆಗೆ ಚಿರತೆ ದಾಳಿ ಮಾಡಿರುವುದರಿಂದ ಗ್ರಾಮದ ಜನ ಭಯಭೀತರಾಗಿದ್ದಾರೆ.ಕೂಡಲೇ ಚಿರತೆ ಸೆರೆ ಹಿಡಿಯುವಂತೆ‌ ಅರಣ್ಯ ಅಧಿಕಾರಿಗಳನ್ನು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.