ADVERTISEMENT

ರಾಜ್ಯದೆಲ್ಲೆಡೆ ದೂರತರಂಗ ವಿಸ್ತರಿಸಲಿ

ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಆಶಯ

​ಪ್ರಜಾವಾಣಿ ವಾರ್ತೆ
Published 9 ಜನವರಿ 2021, 17:11 IST
Last Updated 9 ಜನವರಿ 2021, 17:11 IST
ಮಧುಗಿರಿಯಲ್ಲಿ ದೂರತರಂಗ ಕಾರ್ಯಕ್ರಮವನ್ನು ಸಚಿವ ಎಸ್.ಸುರೇಶ್ ಕುಮಾರ್ ಹಾಗೂ ಜಪಾನಂದ ಮಹರಾಜ್ ಸ್ವಾಮೀಜಿ ಉದ್ಘಾಟಿಸಿದರು
ಮಧುಗಿರಿಯಲ್ಲಿ ದೂರತರಂಗ ಕಾರ್ಯಕ್ರಮವನ್ನು ಸಚಿವ ಎಸ್.ಸುರೇಶ್ ಕುಮಾರ್ ಹಾಗೂ ಜಪಾನಂದ ಮಹರಾಜ್ ಸ್ವಾಮೀಜಿ ಉದ್ಘಾಟಿಸಿದರು   

ಮಧುಗಿರಿ: ‘ರಾಜ್ಯದ ಎಲ್ಲ ವಿದ್ಯಾರ್ಥಿ ಗಳಿಗೂ ದೂರತರಂಗ ಶಿಕ್ಷಣ ವಿಸ್ತಾರವಾಗಲಿ’ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಭಿಪ್ರಾಯಪಟ್ಟರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಇನ್ಫೋಸಿಸ್ ಫೌಂಡೇಶನ್ ಹಾಗೂ ಪಾವಗಡ ರಾಮಕೃಷ್ಣ ಆಶ್ರಮ ಆಯೋ
ಜಿಸಿದ್ದ ದೂರತರಂಗ ಶಿಕ್ಷಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇನ್ಫೋಸಿಸ್ ಸಂಸ್ಥಾಪಕ ಎನ್.ಅರ್.ನಾರಾಯಣಮೂರ್ತಿ ಅವರು ವಿದ್ಯಾಭ್ಯಾಸ ಮಾಡಿದ ಮಧುಗಿರಿ ಶಾಲೆಯಲ್ಲಿ ದೂರ ತರಂಗ ಶಿಕ್ಷಣ ಪ್ರಾರಂಭ ಮಾಡಿರುವುದು ಬಹಳ ಸಂತಸ ತಂದಿದೆ ಎಂದರು.

ADVERTISEMENT

ಕೋವಿಡ್‌–19 ಸಮಾಜದ ಎಲ್ಲ ಕ್ಷೇತ್ರಗಳಿಗೂ ಕರಿ ಛಾಯೆ ಮೂಡಿಸಿದ್ದು, ಅದರ ಜೊತೆಗೆ ಬದುಕಬೇಕಿದೆ. ಕೊರೊನಾವನ್ನು ನಿರ್ಲಕ್ಷಿಸದೆ ಸರ್ಕಾರದ ಆದೇಶ ಪಾಲಿಸಬೇಕು ಎಂದರು.

ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್ ನಾರಾಯಣಮೂರ್ತಿ ವರ್ಚುವಲ್ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ‘ಉತ್ತಮ ಶಿಕ್ಷಣದಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಎಲ್ಲರೂ ಉತ್ತಮ ಚಿಂತನೆ ಮೂಲಕ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಬೇಕು. ನಾನು ವಿದ್ಯಾಭ್ಯಾಸ ಮಾಡಿದ ಶಾಲೆಯಲ್ಲಿ ದೂರ ತರಂಗ ಶಿಕ್ಷಣ ಯೋಜನೆ ಮಕ್ಕಳಿಗೆ ದೊರಕಬೇಕು’ ಎಂದು ತಿಳಿಸಿದರು.

ಸಾಹಿತಿ ಡಾ. ದೊಡ್ಡರಂಗೇಗೌಡ ಮಾತನಾಡಿ, ಎನ್.ಆರ್. ನಾರಾಯಣ ಮೂರ್ತಿ ದಂಪತಿಗಳು ಸ್ವಾರ್ಥವಿಲ್ಲದ ಸಾಧಕರಾಗಿದ್ದು, ಅವರ ಜೀವನ ಗಾಥೆಯನ್ನು ಪಠ್ಯ ಪುಸ್ತಕದಲ್ಲಿ ಅಳವಡಿಸುವಂತೆ ಶಿಕ್ಷಣ ಸಚಿವರಲ್ಲಿ ಮನವಿ ಮಾಡಿದರು.

ಪಾವಗಡದ ರಾಮಕೃಷ್ಣ ಸೇವಾ ಶ್ರಮದ ಜಪಾನಂದ ಮಹರಾಜ್ ಸ್ವಾಮೀಜಿ ಮಾತನಾಡಿ, ‘ನಾರಾಯಣ ಮೂರ್ತಿ ಅವರು ಶಿಕ್ಷಣ ಪಡೆದ ಈ ಶಾಲೆಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಿರುವುದು ಹೆಮ್ಮೆಯ ವಿಷಯ. ಮೂರ್ತಿ ದಂಪತಿಗಳು ಸಮಾಜ ಸೇವೆ
ಯಲ್ಲಿ ತೊಡಗಿ ಕೊಂಡಿರುವುದು ಮುಂದಿ ನ ಪೀಳಿಗೆಗೆ ಮಾದರಿಯಾಗಲಿ’ ಎಂದರು. ಇನ್ಫೋಸಿಸ್ ಸಂಸ್ಥೆಯ ಉಪಾಧ್ಯಕ್ಷ ಗುರುರಾಜ್ ದೇಶಪಾಂಡೆ ಮಾತ ನಾಡಿದರು. ಉಪವಿಭಾಗಾಧಿಕಾರಿ ಸೋಮಪ್ಪ ಇ.ಎಂ.ಕಡಕೋಳ್, ಡಿಡಿಪಿಐ ಎಂ.ರೇವಣ್ಣ ಸಿದ್ದಪ್ಪ, ಬಿಇಒ
ನಂಜುಂಡಯ್ಯ, ಡಿವೈಎಸ್‍ಪಿ ಎಂ. ಪ್ರವೀಣ್, ತಹಶೀಲ್ದಾರ್ ಡಾ. ಜಿ.ವಿಶ್ವನಾಥ್, ಸಮಗ್ರ ಶಿಕ್ಷಣ ಯೋಜನೆ ನಿರ್ದೇಶಕ ಗೋಪಾಲಕೃಷ್ಣ, ಡಯಟ್ ಪ್ರಾಂಶುಪಾಲ ವೈ.ಎನ್ ರಾಮ ಕೃಷ್ಣಯ್ಯ, ಮಂಜುನಾಥ್, ಪಿಯುಸಿ ಡಿ.ಡಿ ನರಸಿಂಹಮೂರ್ತಿ, ಮುಖ್ಯ ಶಿಕ್ಷಕ ಹನುಮಂತರಾಯಪ್ಪ ಇದ್ದರು.

ಟ್ಯಾಬ್ ವಿತರಣೆ: ಪಾವಗಡ ತಾಲ್ಲೂಕಿನ ವಳ್ಳೂರಿನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಸಚಿವ ಸುರೇಶ್‌ ಕುಮಾರ್ ಟ್ಯಾಬ್‌ ವಿತರಿಸಿದರು.

ವಳ್ಳೂರು ಸರ್ಕಾರಿ ಪ್ರೌಢಶಾಲಾ ಮಕ್ಕಳಿಗೆ ಟ್ಯಾಬ್ ಕೊಡಿಸುವ ಮುಖಾಂತರ ಪುರುಷೋತ್ತಮ ರೆಡ್ಡಿ ಉತ್ತಮ ಕೆಲಸ ಮಾಡಿದ್ದಾರೆ. ಇಂತಹ ಕೆಲಸ ಇತರರಿಗೆ ಪ್ರೇರಣೆಯಾಗಬೇಕು. ರೋಟರಿ ಸಂಸ್ಥೆಯು ರಾಜ್ಯದ ಸಾವಿರಾರು ಮಂದಿಗೆ ಟ್ಯಾಬ್ ಕೊಟ್ಟಿದೆ ಎಂದು ಶ್ಲಾಘಿಸಿದರು.

ಟ್ಯಾಬ್ ಪ್ರಾಯೋಜಕ ಪುರುಷೋತ್ತ ಮರೆಡ್ಡಿ, ವೈದ್ಯ ಪ್ರಭಾಕರರೆಡ್ಡಿ, ಮುಖ್ಯ ಶಿಕ್ಷಕ ವೆಂಕಟೇಶ್, ಕಟ್ಟಾ ನರಸಿಂಹ ಮೂರ್ತಿ ಮಾತನಾಡಿದರು. ಪ್ರಭಾರ ಬಿಇಒ ಪವನ್ ಕುಮಾರ್ ರೆಡ್ಡಿ, ಶಿರಸ್ತೇದಾರ್ ನರಸಿಂಹಮೂರ್ತಿ ಉಪಸ್ಥಿತರಿದ್ದರು.

ಕಲಿಯುತ್ತಾ ನಲಿಯೋಣ: ಶಿಕ್ಷಣ ಇಲಾಖೆಯಿಂದ ಜನವರಿ 11ರಿಂದ ಏಪ್ರಿಲ್‌ 5ರವರೆಗೂ ‘ಕಲಿಯುತ್ತಾ ನಲಿಯೋಣ’ ಎಂಬ ಕಾರ್ಯಕ್ರಮ ರೇಡಿಯೊದಲ್ಲಿ ಪ್ರಾರಂಭ ಮಾಡಲಾಗುತ್ತಿದೆ ಎಂದು ಸಚಿವ ಎಸ್.ಆರ್.ಸುರೇಶ್ ಕುಮಾರ್ ತಿಳಿಸಿದರು.

ತಾಲ್ಲೂಕಿನ ಕಸಬಾ ಹಾಗೂ ದೊಡ್ಡೇರಿ ಹೋಬಳಿಯ ಸರ್ಕಾರಿ ಶಾಲೆಗಳಿಗೆ ಶನಿವಾರ ಭೇಟಿ ನೀಡಿ ಮಾತನಾಡಿದರು.

1ರಿಂದ 4ನೇ ತರಗತಿಯ ಮಕ್ಕಳಿಗೆ ಸೋಮವಾರದಿಂದ ಶುಕ್ರವಾರದವರೆಗೂ ಬೆಳಿಗ್ಗೆ 10ರಿಂದ 12ರವರೆಗೂ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಶಾಲೆಗೆ ಬರುವ
ಮಕ್ಕಳು ತಪ್ಪದೇ ತಿಂಡಿ ಹಾಗೂ ಊಟ ಮಾಡಿಕೊಂಡು ಬರಬೇಕು. ಕೋವಿಡ್‌ ಮಾರ್ಗಸೂಚಿ ಅನುಸರಿಸಬೇಕು ಎಂದರು.

ಶಾಸಕ ಎಂ.ವಿ.ವೀರಭದ್ರಯ್ಯ, ಜಿ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಚೌಡಪ್ಪ, ತಹಶೀಲ್ದಾರ್ ಡಾ.ಜಿ.ವಿಶ್ವನಾಥ್, ಡಿಡಿಪಿಐ ರೇವಣ್ಣ ಸಿದ್ದಪ್ಪ, ಇಒ ಅಶ್ವತ್ಥ ನಾರಾಯಣ್, ಬಿಇಒ ನಂಜುಂಡಯ್ಯ, ಬಿಆರ್ ಸಿ ಆನಂದಕುಮಾರ್, ಡಿವೈಎಸ್‌ಪಿ ಎಂ.ಪ್ರವೀಣ್, ಸಿಪಿಐ ಎಂ.ಎಸ್.ಸರ್ದಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.