ADVERTISEMENT

ತುಮಕೂರು | KSRTC ಬಸ್ ಪರಿಶೀಲನೆ ವೇಳೆ ₹ 14 ಲಕ್ಷ, 128 ಗ್ರಾಂ ಚಿನ್ನ ಪತ್ತೆ; ವಶ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2024, 6:49 IST
Last Updated 29 ಮಾರ್ಚ್ 2024, 6:49 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ತುಮಕೂರು: ನಗರದ ಬಟವಾಡಿ ಬಳಿ ಶುಕ್ರವಾರ ಬೆಳಗಿನ ಜಾವ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹14 ಲಕ್ಷ ನಗದು, 128 ಗ್ರಾಂ ಚಿನ್ನಾಭರಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಬೆಂಗಳೂರಿನಿಂದ ತುಮಕೂರು ಕಡೆಗೆ ಬರುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಪರಿಶೀಲನೆ ನಡೆಸಿದಾಗ ಹಣ ಮತ್ತು ಚಿನ್ನ ಪತ್ತೆಯಾಗಿದೆ. ನಗರದ ಚಿಕ್ಕಪೇಟೆಯ ಗಾರ್ಡನ್ ರಸ್ತೆಯಲ್ಲಿರುವ ಚಿನ್ನದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿರುವ ನಾಗಭೂಷಣ್ ಎಂಬುವರು ಹಣ, ಚಿನ್ನ ತಗೆದುಕೊಂಡು ಬರುತ್ತಿದ್ದರು. ಈ ವೇಳೆ ಪೊಲೀಸರು ಪರಿಶೀಲನೆ ನಡೆಸಿ, ದುಡ್ಡು, ಬಂಗಾರ ಜಪ್ತಿ ಮಾಡಿದ್ದಾರೆ.

ADVERTISEMENT

ವಿನೋದ್ ಎಂಬುವರಿಗೆ ಸೇರಿದ ಚಿನ್ನ, ಬೆಳ್ಳಿ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದರು. ಎನ್‌ಇಪಿಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.