ADVERTISEMENT

ತುಮಕೂರು RDPR ಸಹಾಯಕ ಎಂಜಿನಿಯರ್‌ ನಾಗೇಂದ್ರಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2023, 3:23 IST
Last Updated 30 ಅಕ್ಟೋಬರ್ 2023, 3:23 IST
ಲೋಕಾಯುಕ್ತ
ಲೋಕಾಯುಕ್ತ   

ತುಮಕೂರು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಶಿರಾದ ಸಹಾಯಕ ಎಂಜಿನಿಯರ್ ನಾಗೇಂದ್ರಪ್ಪ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಸೋಮವಾರ ದಾಳಿ ನಡೆಸಿದ್ದಾರೆ.

ನಗರದ ಮಿರ್ಜಿ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿರುವ ಮನೆ ಮತ್ತು ಶಿರಾ ಪಟ್ಟಣದಲ್ಲಿರುವ ಕಚೇರಿಯಲ್ಲಿ ಅಧಿಕಾರಿಗಳು ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.

ಲೋಕಾಯುಕ್ತ ಡಿವೈಎಸ್ ಪಿಗಳಾದ ಮಂಜುನಾಥ್, ಹರೀಶ್ ನೇತೃತ್ವದ ಅಧಿಕಾರಿಗಳ ತಂಡ ದಾಖಲೆ ಪರಿಶೀಲನೆಯಲ್ಲಿ ತೊಡಗಿಸಿಕೊಂಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.