ಲೋಕಾಯುಕ್ತ ದಾಳಿ
ತುಮಕೂರು: ಪ್ರಾದೇಶಿಕ ಸಾರಿಗೆ ಕಚೇರಿಯ ನಿವೃತ್ತ ಸಾರಿಗೆ ಅಧಿಕಾರಿ ಎಸ್.ರಾಜು ಅವರ ಆಪ್ತ, ಮಧ್ಯವರ್ತಿ ದಿಬ್ಬೂರಿನ ಸತೀಶ್ ಮನೆ ಮೇಲೆ ಬುಧವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಎಸ್.ರಾಜು ಅವರಿಗೆ ಸಂಬಂಧಿಸಿದ ಬೆಂಗಳೂರಿನ ಎರಡು ಮನೆ, ಬಳ್ಳಾರಿಯಲ್ಲಿ ಒಂದು ಮನೆ ಮತ್ತು ತುಮಕೂರಿನ ದಿಬ್ಬೂರು ಬಳಿಯ ರಾಜು ಆಪ್ತ ಸತೀಶ್ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.
ತುಮಕೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀನಾರಾಯಣ ನೇತೃತ್ವದ ಅಧಿಕಾರಿಗಳ ತಂಡ ದಾಖಲೆ ಪರಿಶೀಲನೆಯಲ್ಲಿ ತೊಡಗಿಸಿಕೊಂಡಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.