ತುಮಕೂರು: ತುಮಕೂರು ವಿಶ್ವವಿದ್ಯಾಲಯ ನೂತನ ಕುಲಪತಿಯಾಗಿ ಕುವೆಂಪು ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಎಂ. ವೆಂಕಟೇಶ್ವರಲು ಅವರು ನೇಮಕಗೊಂಡಿದ್ದಾರೆ.
ನೂತನ ಕುಲಪತಿಯನ್ನು ನೇಮಿಸಿ ಮಂಗಳವಾರ ರಾಜ್ಯಪಾಲರು ಆದೇಶ ಹೊರಡಿಸಿದ್ದು, ಕುಲಪತಿ ಅಧಿಕಾರ ಅವಧಿ 4 ವರ್ಷಗಳು.
ಎಂ. ವೆಂಕಟೇಶ್ವರಲು ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದ್ದು, ಅವರ ನೇಮಕಕ್ಕೆ ಸಮುದಾಯ ಹಾಗೂ ಸಂಘ ಪರಿಹಾರದ ಒತ್ತಡವೂ ಕಾರಣ ಎಂದು ಮೂಲಗಳು ತಿಳಿಸಿವೆ.
ಕುವೆಂಪು ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದ್ದು, ಅದೇ ವಿ.ವಿ.ಯಲ್ಲಿ ಹಿಂದೆ ದೂರ ಶಿಕ್ಷಣ ಕೇಂದ್ರದ ನಿರ್ದೇಶಕರಾಗಿ ಕೆಲಸ ನಿರ್ವಹಿಸಿದ್ದರು. ಹಿಂದೆ ತುಮಕೂರು ವಿಶ್ವವಿದ್ಯಾಲಯದ ಕುಲಸಚಿವರಾಗಿ ಕಾರ್ಯ ನಿರ್ವಹಿಸಿದ್ದು, ಆಡಳಿತದ ಒಳಹೊರನ್ನು ಬಲ್ಲವರಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.